Districts

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಜೊತೆಗಿದ್ದ ಇಬ್ಬರು ಸ್ನೇಹಿತರ ವಿಚಾರಣೆ

ಉಡುಪಿ: ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಸಂತೋಷ್ ಪಾಟೀಲ ಸಾವಿನ ಪ್ರಕರಣದ ತನಿಖೆ ನಡೆಯುತ್ತಿದ್ದು, ಅವರ ಜತೆಗಿದ್ದ ಇಬ್ಬರು ಸ್ನೇಹಿತರನ್ನು ವಿಚಾರಣೆ ಮಾಡಲಾಗುತ್ತಿದೆ ಎಂದು ಎಸ್‌ಪಿ ಎನ್‌.ವಿಷ್ಣುವರ್ಧನ್ ತಿಳಿಸಿದ್ದಾರೆ. ಸಂತೋಷ್‌ ಪಾಟೀಲ್ ಆತ್ಮಹತ್ಯೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿನೀಡಿ 3 ತಾಸಿಗೂ ಹೆಚ್ಚು ಕಾಲ ಎಸ್‌ಪಿ ಮಾಹಿತಿ ಕಲೆಹಾಕಿದರು. ಬಳಿಕ ಮಾತನಾಡಿ ಮಂಗಳೂರಿನಿಂದ ಎಫ್‌ಎಸ್‌ಎಲ್‌ ತಜ್ಞರ ತಂಡ ಉಡುಪಿಗೆ ಬರಲಿದೆ. ಮೃತ ಸಂತೋಷ್ ಪಾಟೀಲ್‌ ಸಂಬಂಧಿಗಳು ಕೂಡ ಉಡುಪಿಗೆ ಬರುತ್ತಿದ್ದು, ಎಲ್ಲರೂ ಬಂದ ಬಳಿಕ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

Share Post