Districts

ಮೀಸಲಾತಿ ಹೆಚ್ಚಳಕ್ಕೆ ಆಗ್ರಹ; ಜಿಲ್ಲಾಧಿಕಾರಿ ಕಚೇರಿಗೆ ಬೀಗ ಜಡಿದ ಪ್ರತಿಭಟನಾಕಾರರು

ಹೊಸಪೇಟೆ; ಮೀಸಲಾತಿ ಹೆಚ್ಚಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳ ಹೋರಾಟ ಕ್ರಿಯಾ ಸಮಿತಿ ಪ್ರತಿಭಟನೆ ನಡೆಸಿತು. ನೂರಾರು ಜನ ಹೊಸಪೇಟೆಯ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದು, ಇದೇ ವೇಳೆ ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಪ್ರವೇಶದ್ವಾರಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಲಾಯಿತು.

ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಕೆಲಕಾಲ ರಸ್ತೆ ತಡೆ ನಡೆಸಿದರು. ಅನಂತರ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿಯ ಮುಖ್ಯ ಪ್ರವೇಶ ದ್ವಾರಕ್ಕೆ ಸರಪಳಿ ಹಾಕಿ, ಬೀಗ ಜಡಿದರು. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆಯಿತು.

 

Share Post