Districts

HARSHA MUDER CASE; ಸಹಜಸ್ಥಿತಿಯತ್ತ ಶಿವಮೊಗ್ಗ; ಶಾಲಾ ಕಾಲೇಜುಗಳು ಓಪನ್‌

ಶಿವಮೊಗ್ಗ: ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದ್ರೆ ಇಂದು ಶಾಲಾ-ಕಾಲೇಜುಗಳನ್ನು ತೆರೆಯಲಾಗಿದೆ. ಯಾವುದೇ ಭೀತಿಯಿಲ್ಲದೆ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳತ್ತ ಹೆಜ್ಜೆ ಇಟ್ಟಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಮಾರ್ಚ್‌ 4 ರವರೆಗೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇಷ್ಟು ಬಿಟ್ಟರೆ ಶಿವಮೊಗ್ಗ ನಗರದಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಬಂದಿವೆ. ಎಲ್ಲಾ ವ್ಯಾಪಾರ ವಹಿವಾಟುಗಳು ಸರಾಗವಾಗಿ ನಡೆಯುತ್ತಿವೆ. ಇಂದು ಶಾಲಾ-ಕಾಲೇಜುಗಳು ಕೂಡಾ ಒಪನೆ ಆಗಿವೆ.

 

Share Post