Districts

ನಕಲಿ ನಂಬರ್‌ ಇದ್ದ ಕಾರಿನಲ್ಲಿ ಬಂದು ಹತ್ಯೆ; ಓರ್ವ ಆರೋಪಿ ಪೊಲೀಸರ ವಶಕ್ಕೆ

ಶಿವಮೊಗ್ಗ: ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬವಂಧ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಅನುಮಾನದ ಹಿನ್ನೆಲೆಯಲ್ಲಿ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ಇನ್ನು ನಾಲ್ಕೈದು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದುಬಂದಿದ್ದು, ಆರೋಪಿಗಳು ಶಿವಮೊಗ್ಗದ ಹೊರವಲಯದಲ್ಲಿ ಅಡಗಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆರೋಪಿಗಳು ಶಿವಮೊಗ್ಗ ನಗರದ ಹೊರವಲಯದಲ್ಲಿ ಅಡಗಿಕೊಂಡಿದ್ದಾರೆಂಬ ಖಚಿತ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶಿವಮೊಗ್ಗದ ಹೊರವಲಯದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಇನ್ನು ಆರೋಪಿಗಳು ನಿನ್ನೆ ಮಾರುತಿ ಸ್ವಿಫ್ಟ್‌ ಕಾರಿಗೆ ನಕಲಿ ನಂಬರ್‌ ಅಂಟಿಸಿಕೊಂಡು ಶಿವಮೊಗ್ಗ ನಗರದ ಹೊರವಲಯದಲ್ಲಿ ನಿಂತಿದ್ದರೆಂದು ಹೇಳಲಾಗುತ್ತಿದೆ. ಈ ವೇಳೆ ಆಟೋದಲ್ಲಿ ಬಂದ ದುಷ್ಕರ್ಮಿಯೊಬ್ಬ ಅವರಿಗೆ ಮಾರಕಾಸ್ತ್ರಗಳನ್ನು ನೀಡಿದ್ದಾನೆ. ಅನಂತರ ದುಷ್ಕರ್ಮಿಗಳು ಹರ್ಷಾನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದುಷ್ಕರ್ಮಿಗಳು ಬಂದಿದ್ದ ಕಾರಿಗೆ CO-1396 ಎಂಬ ನಂಬರ್‌ ಅಂಟಿಸಿದ್ದರೆಂದು ಗೊತ್ತಾಗಿದೆ.

Share Post