DistrictsPolitics

ಶಿವಾಜಿ ಪ್ರತಿಮೆ ಮರು ಅನಾವರಣ ವಿಚಾರ; ಹೆಬ್ಬಾಳ್ಕರ್‌ ವಿರುದ್ಧ ಸಿಎಂ ಕಿಡಿ

ಬೆಂಗಳೂರು; ಮೊನ್ನೆಯಷ್ಟೇ ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆಯನ್ನು ಸಿಎಂ ಬೊಮ್ಮಾಯಿ ಅನಾವರಣಗೊಳಿಸಿದ್ದರು. ಆದ್ರೆ ಸ್ಥಳೀಯ ಶಾಸಕ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು ಅದಕ್ಕೆ ಪ್ರತಿಯಾಗಿ ಮತ್ತೊಮ್ಮೆ ಪ್ರತಿಮೆ ಉದ್ಘಾಟನೆ ಮಾಡಲು ಹೊರಟಿದ್ದಾರೆ. ಇಂದು ಶಿವಾಜಿ ಪ್ರತಿಮೆ ಮರು ಉದ್ಘಾಟನೆ ಕಾರ್ಯಕ್ರಮ ಆಯೋಜಿದ್ದಾರೆ. ಇದಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಸರ್ಕಾರದಿಂದ ನಡೆದ ಕಾರ್ಯಕ್ರಮಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ನೀಡಲಾಗಿತ್ತು. ಅವರೇ ಕಾರ್ಯಕ್ರಮದ ಅಧ್ಯಕ್ಷರಾಗಿದ್ದರು. ಅಂದು ಕಾರ್ಯಕ್ರಮಕ್ಕೆ ಬಾರದೆ ಇಂದು ಮತ್ತೆ ಪ್ರತಿಮೆ ಅನಾವರಣಕ್ಕೆ ಹೊರಟಿದಿದ್ದಾರೆ. ಇದು ತಪ್ಪು ಎಂದು ಹೇಳಿದ್ದಾರೆ.

ಕ್ರಾಂತಿ ವೀರರ ಹೆಸರಿನಲ್ಲಿ ರಾಜಕೀಯ ಮಾಡೋದು ಸರಿಯಲ್ಲ. ಶಿವಾಜಿ ಪ್ರತಿಮೆ ಉದ್ಘಾಟನೆಗೆ ನಾವು ಎಲ್ಲರನ್ನೂ ಕರೆದಿದ್ದೆವು. ಯಡಿಯೂರಪ್ಪ 50 ಲಕ್ಷ ರೂಪಾಯಿ ಬಿಡುಗಡೆ ಮಾಡಿದ್ದರು. ಪ್ರತಿಮೆ ಸ್ಥಾಪನೆ ಮಾಡಿರುವ ಕೋಟೆ ಸರ್ಕಾರಕ್ಕೆ ಸೇರಿದ್ದಾಗಿದೆ. ಈ ಸ್ಥಳದಲ್ಲಿ ಹೇಗೆ ಪ್ರತಿಮೆಯನ್ನು ಮರು ಅನಾವರಣ ಮಾಡುತ್ತಾರೆ ಎಂದು ಪ್ರಶ್ನಿಸಿರುವ ಸಿಎಂ, ಇದು ಸರ್ಕಾರದ ಕಾರ್ಯಕ್ರಮವಾಗಿತ್ತು. ಸರ್ಕಾರವೇ ಪ್ರತಿಮೆಗೆ ಹಣ ಕೊಟ್ಟಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

Share Post