Districts

ಸಹಜ ಸ್ಥಿತಿಯತ್ತ ಶಿವಮೊಗ್ಗ; ಶಾಲಾ ಕಾಲೇಜುಗಳಿಗೆ ರಜೆ

ಶಿವಮೊಗ್ಗ: ಭಾನುವಾರ ರಾತ್ರಿ ನಡೆದ ಹಿಂದೂಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಹಿನ್ನೆಲೆಯಲ್ಲಿ ನಿನ್ನೆ ಶಿವಮೊಗ್ಗದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟಿದ್ದರು. ಇದೀಗ ಶಿವಮೊಗ್ಗ ನಗರ ಸಹಜ ಸ್ಥಿತಿಗೆ ಮರಳಿದೆ. ಹರ್ಷಾ ಅಂತ್ಯಕ್ರಿಯೆ ನಂತರ ಎಲ್ಲವೂ ತಣ್ಣಗಾಗಿದೆ.

ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸ್‌ ಬಂದೋಬಸ್ತ್‌ ಮುಂದುವರೆಸಲಾಗಿದೆ. ಶಿವಮೊಗ್ಗ ನಗರದಾದ್ಯಂತ 4 ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಹರ್ಷ ಕುಟುಂಬ ವಾಸವಿರುವ ಸೀಗೆಹಟ್ಟಿ ಸುತ್ತಲ ಪ್ರದೇಶಗಳಲ್ಲಿ ಹೆಚ್ಚು ಭದ್ರತೆ ಒದಗಿಸಲಾಗಿದೆ. ಎಡಿಜಿಪಿ ಎಸ್ ಮುರುಗನ್, ಪೂರ್ವವಲಯ ಐಜಿಪಿ ತ್ಯಾಗರಾಜನ್ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ. ಶಾಲಾ ಕಾಲೇಜುಗಳಿಗೆ ಇವತ್ತೂ ಕೂಡಾ ರಜೆ ಘೋಷಣೆ ಮಾಡಲಾಗಿದೆ. ಅದು ಬಿಟ್ಟರೆ ಎಲ್ಲಾ ವ್ಯಾಪಾರ ವಹಿವಾಟುಗಳು ಎಂದಿನಂತೆ ಮುಂದುವರೆದಿವೆ. ಸರ್ಕಾರಿ ಕಚೇರಿಗಳು ಕೂಡಾ ಕಾರ್ಯನಿರ್ವಹಿಸುತ್ತಿವೆ.

Share Post