Districts

ಬಡ್ಡಿ ವ್ಯವಹಾರ ನಡೆಸುತ್ತಿದ್ದ ಮಹಿಳೆಗೆ ಗುಂಡು ಹಾರಿಸಿ ಕೊಲೆ..!

ಚಿಕ್ಕೋಡಿ: ಬಡ್ಡಿ ವ್ಯವಹಾರ ನಡೆಸುತ್ತಿದ್ದ ಮಹಿಳೆಯ ತಲೆಗೆ ಗುಂಡಿಕ್ಕಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಬಳಿ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. ಐವತ್ತಾರು ವರ್ಷದ ಶೈಲಾ ನಿರಂಜನ್‌ ಎಂಬಾಕೆಯೇ ಕೊಲೆಯಾದವಳು. ದುಷ್ಕರ್ಮಿಗಳು ಪಿಸ್ತೂಲಿನಿಂದ ಮಹಿಳೆ ತಲೆಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

   ಶೈಲಾ ನಿರಂಜನ್‌ ಅವರು ಬಡ್ಡಿ ವ್ಯವಹಾರ ನಡೆಸುತ್ತಿದ್ದರು. ಈ ವ್ಯವಹಾರದಿಂದಾಗಿಯೇ ಮನಸ್ತಾಪ ಬಂದು ಈ ಕೃತ್ಯ ಎಸಗಿರಬಹುದು ಎಂದು ಹೇಳಲಾಗುತ್ತಿದೆ. ಈ ಸಂಬಂಧ ಸಂಕೇಶ್ವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರಿಗೆ ಆರೋಪಿಗಳ ಬಗ್ಗೆ ಮಾಹಿತಿ ಇದ್ದು, ಪೊಲೀಸರು ಅವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Share Post