Districts

ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ: ಸಿಎಂ

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿದ್ದಗಂಗಾ ಮಠದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಎರಡನೇ ವರ್ಷದ ಲಕ್ಷ ಪುಷ್ಪ ಬಿಲ್ವಾರ್ಜನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಅವರು ಮಾಡಿರೋ ಸೇವೆ ಅನನ್ಯ. ಆಧುನಿಕ ಭಾರತದಲ್ಲಿ ಅವರು ಮಾಡಿದ ಸೇವೆ ವೇಳೆಯಲ್ಲಿ ನಾವಿರುವುದು ಧನ್ಯತಾ ಭಾವ. ಅದರ ಆಚರಣೆಯ ರೂಪುರೇಷಗಳನ್ನ ಸಿದ್ದಲಿಂಗ ಶ್ರೀಗಳ ಬಳಿ ಚರ್ಚಿಸಲಾಗುವುದು ಎಂದರು

Share Post