DistrictsPolitics

ನೇಹಾ ತಂದೆಗೆ ಕರೆ ಮಾಡಿ ಸಾರಿ ಹೇಳಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ; ಇಲ್ಲಿನ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಪುತ್ರಿ ನೇಹಾ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.. ಈ ನಡುವೆ ನೇಹಾ ತಂದೆ ನಿರಂಜನ ಹಿರೇಮಠರ ಜೊತೆ ಮೊಬೈಲ್ ನಲ್ಲಿ ಮಾತನಾಡಿದ್ದಾರೆ‌.. ನಿರಂಜನ್ ವೆರಿ ವೆರಿ ಸಾರಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ನಿಮ್ಮ ಜೊತೆ ನಾವಿದ್ದೇವೆ ಎಂಬ ಭರವಸೆಯನ್ನೂ ನೀಡಿದ್ದಾರೆ..

  ನೇಹಾ ಕೊಲೆಯಾದಾಗ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಗೃಹಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದರು.. ಈ ವೇಳೆ ವೈಯಕ್ತಿಕ ವಿಚಾರವಾಗಿ ನಡೆದ ಕೊಲೆ ಎಂದು ಹೇಳಿದ್ದರು.. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ನೇಹಾ ತಂದೆ ಕೂಡಾ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು..

  ಈ ನಡುವೆಯೇ ಸಚಿವ ಹೆಚ್.ಕೆ.ಪಾಟೀಲ್ ಅವರು ನಿರಂಜನ್ ಅವರ ನಿವಾಸಕ್ಕೆ ತೆರಳಿದ್ದರು.. ಈ ವೇಳೆ ಸಚಿವರು ಸಿಎಂ ಸಿದ್ದರಾಮಯ್ಯಗೆ ಕರೆ ಮಾಡಿ ನಿರಂಜನ್ ಗೆ ಕೊಟ್ಟಿದ್ದಾರೆ.. ಆಗ ಸಿದ್ದರಾಮಯ್ಯ ವೆರಿ ವೆರಿ ಸಾರಿ ಎಂದಿದ್ದಾರೆ. ಇದೇ ವೇಳೆ ನಿರಂಜನ್ ಅವರು ಸಿಐಡಿ ತನಿಖೆಗೆ ವಹಿಸಿದ್ದಕ್ಕೆ ಥ್ಯಾಂಕ್ಸ್ ಹೇಳಿದ್ದಾರೆ.

  ಹಿರೇಮಠ್ ಅವರು ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದಾರೆ.. ಹೀಗಿದ್ದರೂ ಸಿಎಂ ಸಿದ್ದರಾಮಯ್ಯ ಅವರ ಮನೆಗೆ ಭೇಟಿ ಕೊಟ್ಟಿಲ್ಲ. ಜೊತೆಗೆ ಅವರು ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.. ಈ ನಡುವೆ ಸಿಎಂ ಸಿದ್ದರಾಮಯ್ಯ ಅವರು ನಿರಂಜನ್ ಜೊತೆ ಮಾತನಾಡಿದ್ದಾರೆ.

 

Share Post