DistrictsPolitics

ಅತ್ಯಾಚಾರ, ಕೊಲೆ ಪ್ರಕರಣ; ಬಾಲಕಿ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ

ಮಂಡ್ಯ; ಇತ್ತೀಚೆಗೆ ಟ್ಯೂಷನ್‌ಗೆಂದು ಹೋಗಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲಾಗಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ಆರೋಪಿಯನ್ನು ಬಂಧಿಸಲಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂಬ ಆಗ್ರಹ ಕೇಳಿಬರುತ್ತಿದೆ. ಇನ್ನೊಂದು ಬಾಲಕಿಯ ಮನಯೆಲ್ಲಿ ಇನ್ನೂ ದುಃಖ ಮಡುಗಟ್ಟಿದೆ. ಈ ಹಿನ್ನೆಲೆಯಲ್ಲಿ ಹಲವಾರು ನಾಯಕರು ನಿತ್ಯ ಬಾಲಕಿಯ ಮನೆಗೆ ಭೇಟಿ ನೀಡಿ, ಪೋಷಕರಿಗೆ ಸಾಂತ್ವನ ಹೇಳುತ್ತಿದ್ದಾರೆ.

ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಳವಳ್ಳಿಯ ಬಾಲಕಿಯ ಮನೆಗೆ ಭೇಟಿ ನೀಡಿದ್ದರು. ಬಾಲಕಿ ಕುಟುಂಬದವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ಅವರಿಗೆ ಸಾಂತ್ವನ ಹೇಳಿದರು. ಈ ವೇಳೆ ಕಾಂಗ್ರೆಸ್‌ ನಾಯಕರಾದ ಚಲುವರಾಯಸ್ವಾಮಿ ಹಾಗೂ ನರೇಂದ್ರ ಸ್ವಾಮಿ ಇದ್ದರು.

ಸಿದ್ದರಾಮಯ್ಯ ಅವರು ಬರುತ್ತಾರೆ ಎಂದು ತಿಳಿದಿದ್ದರಿಂದ ನೂರಾರು ಜನರು ಸ್ಥಳದಲ್ಲಿ ಜಮಾಯಿಸಿದ್ದರು. ಹೀಗಾಗಿ, ಸಿದ್ದರಾಮಯ್ಯ ಅವರು ಮನೆ ಪ್ರವೇಶ ಮಾಡಲು ಹರಸಾಹಸಪಡಬೇಕಾಯಿತು. ಇನ್ನು ಇದಕ್ಕೂ ಮೊದಲು ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಕೂಡಾ ಬಾಲಕಿ ಮನೆಗೆ ಭೇಟಿ ನೀಡಿದ್ದರು. ಜಮೀರ್‌ ಅವರು ವೈಯಕ್ತಿಕವಾಗಿ ಆ ಕುಟುಂಬಕ್ಕೆ ಐದು ಪಕ್ಷ ರೂಪಾಯಿ ನೆರವು ನೀಡಿದರು.

Share Post