DistrictsPolitics

ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಕೆಲಸ ಮಾಡೋಣ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸೋಣ – ಡಿಕೆಶಿ

ದಾವಣಗೆರೆ; ಸಿದ್ದರಾಮಯ್ಯ ಮುಂದಾಳತ್ವದಲ್ಲಿ ಕೆಲಸ ಮಾಡೋಣ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮಯ್ಯನವರ 75ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾವು ನೀವೆಲ್ಲಾ ಪುಣ್ಯವಂತರು. ಈ ದೇಶಕ್ಕೆ ಸ್ವತಂತ್ರ್ಯ ಬಂದು 75 ವರ್ಷ ಆಗಿದೆ. ಇದೇ ಸಂದರ್ಭದಲ್ಲಿ ನಮ್ಮ ನಿಮ್ಮೆಲ್ಲರ ನಾಯಕ ಸಿದ್ದರಾಮಯ್ಯ ಕೂಡಾ ಹುಟ್ಟುಹಬ್ಬ ಆಚರಿಸ್ತಾ ಇದ್ದಾರೆ. ದೇಶಕ್ಕೂ ಸಂಭ್ರಮ, ಕಾಂಗ್ರೆಸ್ಸಿಗೂ, ಸಿದ್ದರಾಮಯ್ಯಗೂ ಸಂಭ್ರಮ, ನಿಮಗೂ ಸಂಭ್ರಮ, ನಮಗೂ ಸಂಭ್ರಮ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು. ಸಿದ್ದರಾಮಯ್ಯ ನವರ ಅಧಿಕಾರ ನೀವು, ನಾವೆಲ್ಲಾ ನೋಡಿದ್ದೇವೆ. ೨೦೧೩ರಲ್ಲಿ ಸಿದ್ದರಾಮಯ್ಯ ಅವರನ್ನು ರಾಹುಲ್‌ ಗಾಂಧಿ. ಸೋನಿಯಾ ಅವರು ಸಿಎಂ ಆಗಿ ನೇಮಕ ಮಾಡಿದರು. ಆಗ ಅವರು ಬಸವ ಜಯಂತಿ ದಿನ ಅಧಿಕಾರ ಸ್ವೀಕಾರ ಮಾಡಿದ್ದರು. ಬಸವಣ್ಣನ ತತ್ವವೇ ಕಾಂಗ್ರೆಸ್‌ ಪಕ್ಷದ ತತ್ವ ಎಂದು ಡಿ.ಕೆ.ಶಿವಕುಮಾರ್‌ ಹೇಳಿದರು.

Share Post