DistrictsPolitics

ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾದ ಮೇಲೆ ಅಭೂತಪೂರ್ವ ಕೆಲಸ ಮಾಡುತ್ತಿದ್ದಾರೆ; ರಾಹುಲ್‌ ಗಾಂಧಿ

ದಾವಣಗೆರೆ; ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ಆಲಿಂಗನ ಮಾಡಿಕೊಂಡಿದ್ದು ನೋಡಿ ತುಂಬಾ ಖುಷಿಯಾಯ್ತು. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್‌ ಅಧಿಕಾರ ವಹಿಸಿಕೊಂಡ ಮೇಲೆ ಅಭೂತಪೂರ್ವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಸಾಮಾನ್ಯವಾಗಿ ಹುಟ್ಟುಹಬ್ಬದ ಸಮಾರಂಭಗಳಿಗೆ ಹೋಗುವುದಿಲ್ಲ. ಸಿದ್ದರಾಮಯ್ಯ ಜೊತೆ ವಿಶೇಷ ಬಾಂಧವ್ಯ ಇದ್ದಿದ್ದಕ್ಕೆ ನಾನು ಇಲ್ಲಿಗೆ ಬಂದಿದ್ದೇನೆ ಎಂದು ಹೇಳಿದರು.

ಪ್ರಾಮಾಣಿಕತೆ ಮೂಲ ತತ್ವದ ಬಗ್ಗೆ ಹೇಳಿದ್ದು ಬಸವಣ್ಣ. ಬಸವಣ್ಣನವರ ಮೂಲ ತತ್ವಕ್ಕೆ ಬಿಜೆಪಿ ವಿರೋಧವಾಗಿದೆ. ಕರ್ನಾಟಕದ ಜನರನ್ನು ಸದೃಢವಾಗಿಸಲು ಕಾಂಗ್ರೆಸ್‌ ಬಯಸುತ್ತದೆ. ದುರ್ಬಲರು, ಬಡವರ ಬಗ್ಗೆ ಸಿದ್ದರಾಮಯ್ಯ ಸ್ಪಂದನೆ ನನಗೆ ಅಚ್ಚುಮೆಚ್ಚು ಎಂದು ರಾಹುಲ್‌ ಗಾಂಧಿ ಹೇಳಿದರು. ಬಿಜೆಪಿ ಸರ್ಕಾರದ ಭ್ರಷ್ಟ ಆಡಳಿತದಿಂದ ರಾಜ್ಯದಲ್ಲಿ ಅಶಾಂತಿ ನೆಲೆಸಿದೆ. ಕೇಂದ್ರ ಸರ್ಕಾರದ ದೊಡ್ಡ ಸಾಧನೆ ಎಂದರೆ ಅದು ನೋಟ್‌ ಬ್ಯಾನ್‌ ಅಷ್ಟೇ ಎಂದು ಕೇಂದ್ರ ಸರ್ಕಾರದ ವಿರುದ್ಧ ರಾಹುಲ್‌ ವಾಗ್ದಾಳಿ ನಡೆಸಿದರು.

Share Post