Districts

ಸಿದ್ದೇಶ್ವರ ಸ್ವಾಮೀಜಿಗೆ ಅನಾರೋಗ್ಯ ಹಿನ್ನೆಲೆ; ಆಶ್ರಮದತ್ತ ಭಕ್ತರ ದಂಡು

ವಿಜಯಪುರ; ವಿಜಯಪುರ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ ಭಕ್ತರ ದಂಡು ಆಶ್ರಮದತ್ತ ಧಾವಿಸಿ ಬರುತ್ತಿದೆ. ಭಕ್ತರನ್ನ ನಿಯಂತ್ರಿಸಲು ಮುಂಜಾಗ್ರತಾ ಕ್ರಮವಾಗಿ ಮಠದ ಸುತ್ತ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

ವಿಜಯಪುರದ ಜ್ಞಾನಯೋಗಾಶ್ರಮ ಸುತ್ತಲೂ ಹೆಚ್ಚಿನ ಭದ್ರತೆಗಾಗಿ ಖಾಕಿ ಪಡೆಯನ್ನ ನಿಯೋಜನೆ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ.

ಹೆಚ್ಚಿನ ಭದ್ರತೆಗಾಗಿ ಗದಗ, ಬಾಗಲಕೋಟೆ ಜಿಲ್ಲೆಯಿಂದ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಡಿಎಸ್ಪಿ -5,ಸಿಪಿಐ -20, ಪಿಎಸ್ಐ -50, ಎಎಸ್ಐ -100,ಸಿಎಚ್ ಸಿ-ಸಿಪಿಸಿ-1000 ಸಿಬ್ಬಂದಿ ನಿಯೋಜನೆ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

Share Post