Districts

ಗಡಿ ವಿಚಾರ ನಿಭಾಯಿಸುವಲ್ಲಿ ಸರ್ಕಾರಗಳು ವಿಫಲ; ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಳಗಾವಿ; ಮಹಾರಾಷ್ಟ್ರ ಹಾಗೂ ಕರ್ನಾಟಕ ಗಡಿ ವಿಚಾರ ನಿಭಾಯಿಸುವಲ್ಲಿ ಮೂರೂ ಸರ್ಕಾರಗಳು ವಿಫಲವಾಗಿವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರದವರು ಬಾಯಿಗೆ ಬಂದ ಹಾಗೆ ಮಾತಣಾಡಬಾರದು ಎಂದು ಎಚ್ಚರಿಸಿದರು. 

  ಮಹಾರಾಷ್ಟ್ರ ಡ್ಯಾಂ ಎತ್ತರ ಹೆಚ್ಚಿಸುವಂತೆ NCP ಶಾಸಕರು ಒತ್ತಡ ಹಾಕಿದ ವಿಚಾರ ಸಂಬಂಧ ಮಾತನಾಡಿದ ಸಿದ್ದರಾಮಯ್ಯ, ಮಹಾರಾಷ್ಟ್ರ, ಕರ್ನಾಟಕ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ. ಗಡಿ ವಿಚಾರದಲ್ಲಿ ಶಾಂತಿ ಕಾಪಾಡಲು ಕೇಂದ್ರ ಗೃಹ ಸಚಿವರು ಹೇಳಿದ್ದಾರೆ. ಆದರೂ ಮಹಾರಾಷ್ಟ್ರದ ನಾಯಕರು ಗಡಿ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ ಎಂದರು.

ಈ ಹಿಂದೆ ಮಹಾಜನ್​ ಆಯೋಗ ಜಾರಿಗೆ ಮಹಾರಾಷ್ಟ್ರ ಸರ್ಕಾರ ಒತ್ತಾಯ ಮಾಡಿತ್ತು. ಮಹಾಜನ್​ ಆಯೋಗದ ವರದಿಯಂತೆ ಗಡಿ ಸಮಸ್ಯೆ ಪರಿಹರಿಸಲಾಗಿದೆ. ಆದರೂ ಮಹಾರಾಷ್ಟ್ರದವರು ಗಡಿ ವಿಚಾರವಾಗಿ ಕ್ಯಾತೆ ತೆಗೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.

Share Post