CrimeDistricts

ಶಿರಸಿ ಬಳಿ ಖಾಸಗಿ ಬಸ್‌ ಪಲ್ಟಿ; ಮಹಿಳೆ ದುರ್ಮರಣ

ಶಿರಸಿ; ಶಿರಸಿ ಬಳಿ ನಡೆದ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಖಾಸಗಿ ಶಾಲಾ ಬಸ್‌ ಪಲ್ಟಿಯಾಗಿ ಈ ದರ್ಘಟನೆ ಸಂಭವಿಸಿದೆ. ಶಿರಸಿ-ಹಾವೇರಿ ರಾಷ್ಟ್ರೀಯ ಹೆದ್ದಾರಿಯ ಬುಗುಡಿಕೊಪ್ಪ ಸಮೀಪ ಈ ಘಟನೆ ನಡೆದಿದೆ.
ರಾಣೆಬೆನ್ನೂರಿನ ಪರಿಣಿತಿ ವಿದ್ಯಾ ಮಂದಿರ ಶಾಲೆ ಉದ್ಯೋಗಿ ಕಸ್ತೂರಮ್ಮ (60) ಮೃತ ದುರ್ದೈವಿ. ಇಂದು ಕನಕ ಜಯಂತಿ ಹಿನ್ನೆಲೆಯಲ್ಲಿ ಶಾಲೆಗೆ ರಜೆ ಇತ್ತು. ಹೀಗಾಗಿ ಶಾಲೆಯ ಸಿಬ್ಬಂದಿ ರಾಣೆಬೆನ್ನೂರಿನಿಂದ ಶಿರಸಿಗೆ ಪ್ರವಾಸ ತೆರಳುತ್ತಿದ್ದರು. ಈ ವೇಳೆ ದುರಂತ ನಡೆದಿದೆ.

ಬಸ್ ನಲ್ಲಿ 13 ಮಂದಿ ಪ್ರಯಾಣಿಸುತ್ತಿದ್ದು, ಇದರಲ್ಲಿ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

 

Share Post