CrimeDistricts

ಪ್ರತಿಭಟನೆಗೆ ಮುಂದಾಗಿದ್ದ ನವ್ಯಶ್ರೀ ಪೊಲೀಸರ ವಶಕ್ಕೆ

ಬೆಳಗಾವಿ; ಅತ್ಯಾಚಾರ ಕೇಸ್‌ ದಾಖಲಿಸಿದ್ದರೂ ಆರೋಪಿಯನ್ನು ಬಂಧಿಸಿಲ್ಲ ಎಂದು ಸ್ವತಂತ್ಯ್ರೋತ್ಸವ ಧ್ವಜಾರೋಹಣ ಕಾರ್ಯಕ್ರಮದ ವೇಳೆ ಪ್ರತಿಭಟನೆಗೆ ಮುಂದಾಗಿದ್ದ ಸಾಮಾಜಿಕ ಕಾರ್ಯಕರ್ತೆ ನವ್ಯಶ್ರೀ ರಾವ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

     ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಬೆಳಗಾವಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಧ್ವಜಾರೋಹಣ ಕಾರ್ಯಕ್ರಮದ ವೇಳೆ ನವ್ಯಶ್ರೀ ಪ್ರತಿಭಟನೆಗೆ ಮುಂದಾಗಿದ್ದರು. ಹೀಗಾಗಿ ಅವರನ್ನು ಬೆಳಗಾವಿ ರಾಮದೇವ ಹೋಟೆಲ್‌ ಬಳಿಯೇ ಎಪಿಎಂಸಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

     ನವ್ಯಶ್ರೀ ವಿರುದ್ಧದ ಅತ್ಯಾಚಾರ ಆರೋಪ ಎದುರಿಸುತ್ತಿರುವ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರನ್ನು ಬಂಧಿಸುವಂತೆ‌ ನವ್ಯಶ್ರೀ ಪಟ್ಟುಹಿಡಿದಿದ್ದಾರೆ. ಟಾಕಳೆ ಬಂಧನಕ್ಕೆ ‌ಆಗ್ರಹಿಸಿ ಸಚಿವ ಗೋವಿಂದ ಕಾರಜೋಳ ಎದುರೇ ಪ್ರತಿಭಟನೆ ನಡೆಸಲು‌ ನಿರ್ಧರಿಸಿದ್ದ  ನವ್ಯಶ್ರೀ ಅವರನ್ನು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದು ಬೆಳಗಾವಿ ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ.

Share Post