CrimeDistricts

ಸಾಮಾಜಿಕ ಬಹಿಷ್ಕಾರ; ಗುಂಡ್ಲುಪೇಟೆಯಲ್ಲಿ ವ್ಯಕ್ತಿ ಆತ್ಮಹತ್ಯೆ

ಚಾಮರಾಜನಗರ; ಗ್ರಾಮಸ್ಥರು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಗುಂಡ್ಲುಪೇಟೆ ತಾಲ್ಲೂಕಿನ ಯಡವನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಶಿವರಾಜು ಎಂದು ಗುರುತಿಸಲಾಗಿದೆ.

ಶಿವರಾಜು ಆತ್ಮಹತ್ಯೆಗೆ ಕಾರಣರಾದ ವ್ಯಕ್ತಿಗಳನ್ನು ಬಂಧಿಸಬೇಕೆಂದು ಸಂಬಂಧಿಕರು ಹಾಗೂ ಗ್ರಾಮಸ್ಥರು ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಪೊಲೀಸರು 17 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಬಂಧಿಸುವ ಭರವಸೆ ನೀಡಿದ್ದಾರೆ. ಹೀಗಾಗಿ ಪ್ರತಿಭಟನೆ ಕೈಬಿಡಲಾಗಿದೆ.

ಇದೇ ಗ್ರಾಮದ ಶಿವಣ್ಣನಾಯ್ಕ ಎಂಬಾತ ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬನಿಗೆ ಚಪ್ಪಲಿಯಿಂದ ಹೊಡೆದಿದ್ದ. ಈ ಕಾರಣಕ್ಕಾಗಿ ಶಿವಣ್ಣನಾಯ್ಕನಿಗೆ ಸಾಮಾಜಿಕ ಬಹಿಷ್ಕಾರ ಹಾಕಲಾಗಿತ್ತು. ಹೀಗಾಗಿ ಶಿವಣ್ಣ ನಾಯ್ಕ ಆತ್ಮಹತ್ಯೆಗೆ ಯತ್ನ ಮಾಡಿದ್ದ. ಈ ವೇಳೆ ಮೃತ ಶಿವರಾಜು ಅವರು ಶಿವಣ್ಣನಾಯ್ಕನ ಮನವೊಲಿಸಿ ಆತ್ಮಹತ್ಯೆ ಮಾಡಿಕೊಳ್ಳದಂತೆ ತಡೆದಿದ್ದರು.

ಈ ವಿಷಯ ಗೊತ್ತಾಗುತ್ತಿದ್ದಂತೆ ಗ್ರಾಮದ ಕೆಲವರು ಚಪ್ಪಲಿಯಲ್ಲಿ ಹೊಡೆದ ಪ್ರಕರಣದಲ್ಲಿ ನೀನೂ ಶಾಮೀಲಾಗಿದ್ದೀಯ ಎಂದು ಶಿವರಾಜುಗೆ ಕೂಡಾ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಜೊತೆಗೆ ಆರು ಸಾವಿರ ರೂಪಾಯಿ ದಂಡ ಕೂಡಾ ವಿಧಿಸಿದ್ದರು. ಇದರಿಂದ ಮನನೊಂದ ಶಿವರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 

Share Post