DistrictsPolitics

ವರುಣಾದಲ್ಲಿ ಸೋಮಣ್ಣ ನಾಮಪತ್ರ ಸಲ್ಲಿಕೆ; ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನ

ಮೈಸೂರು; ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ ತೊಡೆತಟ್ಟಿದ್ದಾರೆ. ವರಿಷ್ಠರು ನೀಡಿರುವ ಟಾಸ್ಕ್‌ ಸ್ವೀಕರಿಸಿರುವ ಸೋಮಣ್ಣ, ಸಿದ್ದರಾಮಯ್ಯ ವಿರುದ್ಧ ಗೆದ್ದೇ ಗೆಲ್ಲುತ್ತೇನೆ ಎಂದು ಹೇಳುತ್ತಿದ್ದಾರೆ. ಇಂದು ಅವರು ತಮ್ಮ ಉಮೇದುವಾರಿಕೆಯನ್ನೂ ಸಲ್ಲಿಸಿದ್ದಾರೆ.

ನಂಜನಗೂಡು ತಾಲ್ಲೂಕು ಕಚೇರಿಯಲ್ಲಿ ಸೋಮಣ್ಣ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದರು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ವಿ.ಶ್ರೀನಿವಾಸಪ್ರಸಾದ್, ಪ್ರತಾಪ ಸಿಂಹ ಮುಂತಾದವರು ಹಾಜರಿದ್ದರು. ಇದೇ ವೇಳೆ ಭಾರಿ ಮೆರವಣಿಗೆ ಮಾಡುವ ಮೂಲಕ ಸೋಮಣ್ಣ ಶಕ್ತಿ ಪ್ರದರ್ಶನ ನಡೆಸಿದರು. ಇದೇ ವೇಳೆ ಮಾತನಾಡಿರುವ ಸಿಎಂ ಬೊಮ್ಮಾಯಿ, ಕಾಂಗ್ರೆಸ್‌ ಆಡಳಿತದಲ್ಲಿದ್ದಾಗ ಹಂಡ್ರೆಡ್‌ ಪರ್ಸೆಂಟ್‌ ಭ್ರಷ್ಟಾಚಾರ ನಡೆಯುತ್ತಿತ್ತು ಅಂತ ಕಿರಿಕಾರಿದರು.

Share Post