Districts

ಐದಾರು ಘಟಾನುಘಟಿ ನಾಯಕರು ಬಿಜೆಪಿಗೆ ಬರ್ತಾರೆ; ಎಸ್‌.ಟಿ.ಸೋಮಶೇಖರ್‌

ಮೈಸೂರು: ಹಳೆ ಮೈಸೂರು ಭಾಗದಲ್ಲಿ ಐದಾರು ಮಂದಿ ಘಟಾನುಘಟಿ ನಾಯಕರು ಬಿಜೆಪಿ ಸೇರ್ಪಡೆ ಆಗಲಿದ್ದಾರೆ ಎಂದು ಮೈಸೂರು ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು,  ಕಾಂಗ್ರೆಸ್​ ಮತ್ತು ಜೆಡಿಎಸ್​​ನ ಎರಡೂ ಪಕ್ಷದವರು ಬಿಜೆಪಿಗೆ ಬರಲಿದ್ದಾರೆ ಎಂದು ಹೇಳಿದರು.

     ವಿಧಾನ ಪರಿಷತ್ತಿನ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಆರಂಭಿಸಿರುವ ಸಚಿವ ಸೋಮಶೇಖರ್‌, ಬೇರೆ ಪಕ್ಷಗಳ ನಾಯಕರು ಬಿಜೆಪಿಗೆ ಸೇರುವ ಬಗ್ಗೆ ಚರ್ಚೆ ಆಗುತ್ತಿದೆ. ಈಗಾಗಲೇ ಐದಾರು ನಾಯಕರು ಯಾವುದೇ ಷರತ್ತಿಲ್ಲದೇ ಬಿಜೆಪಿಗೆ ಬರಲು ತುದಿಗಾಲಲ್ಲಿ ನಿಂತಿದ್ದಾರೆ. ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪಕ್ಷದ ಅಧ್ಯಕ್ಷರು ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.

Share Post