DistrictsHealth

ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿ ಮುಷ್ಕರ; ರೋಗಿ ಸಾವು

ಕಾರವಾರ; ಬಾಕಿ ಇರುವ ವೇತನ ಪಾವತಿಗೆ ಆಗ್ರಹಿಸಿ ಡಯಾಲಿಸಿಸ್‌ ಕೇಂದ್ರದ ನೌಕರರು ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಡಯಾಲಿಸಿಸ್‌ ಸೇವೆಯಲ್ಲಿ ಭಾರಿ ಅಡಚಣೆಯಾಗಿದ್ದು, ಕಾರವಾರ ಜಿಲ್ಲೆಯಲ್ಲಿ ರೋಗಿಯೊಬ್ಬ ಮೃತಪಟ್ಟಿದ್ದಾನೆ. 

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಸರ್ಕಾರಿ ಆಸ್ಪತ್ರೆಯ ಡಯಾಲಿಸಿಸ್​​ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಗುಂಜಾವತಿ ಗ್ರಾಮದ ಸೈಯದ್ ಮೊಹಮ್ಮದ್ ಗೌಸ್ (58) ಎಂಬುವವರೇ ಮೃತಪಟ್ಟವರು. ಡಯಾಲಿಸಿಸ್‌ ಕೇಂದ್ರಗಳ ಸಿಬ್ಬಂದಿ ಹಾಗೂ ಸರ್ಕಾರದ ಹಗ್ಗಜಗ್ಗಾಟದಿಂದ ಅಮಾಯಕನ ಬಲಿಯಾಗಿದೆ.

ಮೂರು ನಾಲ್ಕು ದಿನಗಳಿಂದ ಕರ್ತವ್ಯಕ್ಕೆ ಹಾಜರಾಗದೇ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ರಾಜ್ಯಾದ್ಯಂತ ರೋಗಿಗಳು ಸರ್ಕಾರಿ ಕೇಂದ್ರಗಳಲ್ಲಿ ಡಯಾಲಿಸಿಸ್‌ ಸೌಲಭ್ಯ ಸಿಗದೆ ಪರದಾಡುತ್ತಿದ್ದಾರೆ.

 

Share Post