CrimeDistricts

ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗೆ ಲಾರಿ ಡಿಕ್ಕಿ; ಸ್ಥಳದಲ್ಲೇ ದುರ್ಮರಣ!

ಚಿತ್ರದುರ್ಗ; ಚಿತ್ರದುರ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾಲೇಜಿಗೆ ಹೋಗಲು ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಲಾರಿಯೊಂದು ಡಿಕ್ಕಿ ಹೊಡೆದಿದ್ದು, ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ನಡೆದಿದೆ. ವಿಜಾಪುರ ಗೊಲ್ಲರಹಟ್ಟಿ ಗ್ರಾಮದ 19 ವರ್ಷದ ಸುಚಿತ್ರ ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದಾಳೆ. ಗೊಲ್ಲರಹಟ್ಟಿ ಬಳಿ ಕಾಲೇಜಿಗೆ ಹೋಗೋದಕ್ಕಾಗಿ  ಮೂವರು ವಿದ್ಯಾರ್ಥಿನಿಯರು ಬಸ್ಸಿಗಾಗಿ ಕಾಯುತ್ತಿದ್ದರು. ಈ ವೇಳೆ ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಲಾರಿ ಇವರ ಮೇಲೆ ಹರಿದಿದೆ.

ಲಾರಿ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.

 

Share Post