Districts

ಮಂಗಳೂರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!

ಮಂಗಳೂರು: ಮಂಗಳೂರಿನಲ್ಲಿ ಒಂದೇ ಕುಟುಂಬಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗಂಡ, ಹೆಂಡತಿ, ಇಬ್ಬರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಾಗೇಶ್‌, ವಿಜಯಲಕ್ಷ್ಮಿ ಹಾಗೂ ಮಕ್ಕಳಾದ ಸ್ವಪ್ನ, ಸಮರ್ಥ್‌ ಸಾವನ್ನಪ್ಪಿದವರು. ಪತ್ನಿ, ಮಕ್ಕಳಿಗೆ ವಿಷವುಣಿಸಿ ನಾಗೇಶ್‌ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗೊತ್ತಾಗಿದೆ. ನೂರ್‌ ಜಹಾನ್‌ ಎಂಬಾಕೆಯೇ ನನ್ನ ಸಾವಿಗೆ ಕಾರಣ ಎಂದು ನಾಗೇಶ್‌ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಇಲ್ಲಿನ ಮಾರ್ಗನ್ಸ್‌ ಸ್ಟ್ರೀಟ್‌ನಲ್ಲಿ ಈ ದುರಂತ ನಡೆದಿದೆ. ಮಂಗಳೂರು ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Share Post