DistrictsPolitics

ಕಮಲ ಮುಡಿದ ಸುಮಲತಾ ಅಂಬರೀಶ್‌; ಆದ್ರೆ ಸದ್ಯಕ್ಕೆ ಬಿಜೆಪಿ ಸೇರ್ಪಡೆ ಇಲ್ಲ

ಮಂಡ್ಯ; ಮೋದಿಯವರ ಆಡಳಿತಕ್ಕೆ ಮಾರುಹೋಗಿ ನಾನು ಬಿಜೆಪಿ ಬೆಂಬಲಿಸುತ್ತಿರುವುದಾಗಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ ಘೋಷಣೆ ಮಾಡಿದ್ದಾರೆ. ಮಂಡ್ಯದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಮಂಡ್ಯದ ಅಭಿವೃದ್ಧಿಗಾಗಿ ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದೇವೆ. ನನಗೆ ಎಲ್ಲರ ಸಹಕಾರ ಅಗತ್ಯ ಎಂದು ಹೇಳಿದ್ದಾರೆ.

ಇದು ಮಂಡ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡುವ ಸಮಯ. ಕೇಂದ್ರ ಸರ್ಕಾರದಿಂದ ನನ್ನ ಕೆಲಸಕ್ಕೆ ಸಹಕಾರ ಸಿಕ್ಕಿದೆ. ನಾನು ಕೇಂದ್ರ ಸರ್ಕಾರದಿಂದ ಸಾಕಷ್ಟು ಅನುದಾನಗಳನ್ನು ಮಂಡ್ಯದಲ್ಲಿ ಅಭಿವೃದ್ಧಿ ಮಾಡಿದ್ದೇನೆ. ಮಂಡ್ಯದ ಸಮಗ್ರ ಅಭಿವೃದ್ಧಿಗಾಗಿ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದೇನೆ. ಇಂದಿನಿಂದ ನಾನು ಬಿಜೆಪಿಯನ್ನು ಬೆಂಬಲಿಸುತ್ತಿದ್ದೇನೆ ಎಂದು ಸುಮಲತಾ ಅಂಬರೀಶ್‌ ಅವರು ಹೇಳಿದ್ದಾರೆ. ಇದರಿಂದ ಕೆಲವರಿಗೆ ಬೇಸರ ಆಗಬಹುದು. ಬದಲಾವಣೆಗಾಗಿ ನನಗೆ ಇನ್ನಷ್ಟು ಶಕ್ತಿ ಬೇಕಾಗಿದೆ. ಹೀಗಾಗಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ ಎಂದು ಸುಮಲತಾ ಹೇಳಿಕೊಂಡಿದ್ದಾರೆ.

ಪಕ್ಷೇತರವಾಗಿ ಸ್ಪರ್ಧೆ ಮಾಡಿ ಗೆದ್ದವರು ಆರು ತಿಂಗಳ ಒಳಗೆ ಪಕ್ಷಾಂತರ ಮಾಡಬಹುದು. ಆದ್ರೆ ಈಗ ನಾಲ್ಕು ವರ್ಷ ಕಳೆದಿದೆ. ಹೀಗಾಗಿ ಈಗ ಪಕ್ಷ ಸೇರ್ಪಡೆ ವಿಚಾರ ಬರೋದಿಲ್ಲ. ಬದಲಾಗಿ ನಾನು ಬಿಜೆಪಿಯನ್ನು ಬೆಂಬಲಿಸುತ್ತೇನೆ. ಈಗಲೇ ಪಕ್ಷ ಸೇರ್ಪಡೆಗೆ ಕಾನೂನು ಅಡ್ಡಿ ಬರುವುದರಿಂದ ಸದ್ಯಕ್ಕೆ ಪಕ್ಷ ಸೇರ್ಪಡೆ ಇಲ್ಲ ಎಂದು ಸುಮಲತಾ ಅಂಬರೀಶ್‌ ಹೇಳಿದ್ದಾರೆ.

Share Post