DistrictsPolitics

ಬಿಜೆಪಿ ಸಂಘಟನೆ ಸಭೆಯಲ್ಲಿ ಸುಮಲತಾ; ಎಸ್‌.ಎಂ.ಕೃಷ್ಣ ಭೇಟಿ ಮಾಡಿದ ಸಂಸದೆ

ಮಂಡ್ಯ; ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರ್ಪಡೆಯಾಗೋ ಲಕ್ಷಣ ಕಂಡುಬರುತ್ತಿದೆ. ಯಾಕಂದ್ರೆ ಸುಮಲತಾ ಅವರು ಬಿಜೆಪಿ ಸಂಘಟನೆ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದಾರೆ.

ಮಾರ್ಚ್ 12 ರಂದು ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆ ಮಾಡಲು ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಹೀಗಾಗಿ ಗೆಜ್ಜಲಗೆರೆ ಬಳಿ ವೇದಿಕೆ ಸ್ಥಳ ಪರಿಶೀಲಿಸಲು ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಆಗಮಿಸಿದ್ದರು. ಈ ವೇಳೆ ಬಿಜೆಪಿ ಸಚಿವರು, ಸಂಸದರು, ಬಿಜೆಪಿ ಮುಖಂಡರ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ ಸಂಸದೆ ಸುಮಲತಾ ಅವರೂ ಕಾಣಿಸಿಕೊಂಡಿದ್ದಾರೆ.

ಇನ್ನೊಂದೆಡೆ ಇಂದು ಸುಮಲತಾ ಅವರು ಬಿಜೆಪಿ ಹಿರಿಯ ನಾಯಕ ಎಸ್‌.ಎಂ.ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಿವಾಸದಲ್ಲಿ ಕ಼ೃಷ್ಣರನ್ನು ಭೇಟಿಯಾಗಿ ಸಂಸದೆ ಮಾತುಕತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಅವರು ಬಿಜೆಪಿ ಸೇರಬಹುದು ಎಂಬ ವಿಚಾರ ಮುನ್ನಲೆಗೆ ಬಂದಿದೆ.

Share Post