CrimeDistricts

ಉಗ್ರ ಶಾರೀಖ್‌ ಹತ್ಯೆಗೆ ಸಂಚು; ಆಸ್ಪತ್ರೆಗೆ ಬಿಗಿ ಭದ್ರತೆ

ಮಂಗಳೂರು; ‌ಮಂಗಳೂರಿನ ಕುಕ್ಕರ್‌ ಬಾಂಬ್‌ ಸ್ಫೋಟ ಮಾಡಿದ್ದ ಉಗ್ರ ಶಾರೀಖ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆತ ಗುಣಮುಖನಾಗಿ ಬಂದರೆ, ಆತನ ಹಿಂದಿರುವವರು ಯಾರು ಅನ್ನೋದು ಪತ್ತೆಯಾಗುತ್ತೆ. ಈ ಕಾರಣಕ್ಕಾಗಿಯೇ ವೈದ್ಯರು ಆತನಿಗೆ ಉನ್ನತ ಚಿಕಿತ್ಸೆ ನೀಡುತ್ತಿದ್ದಾರೆ. ಈ ಮಧ್ಯೆ ಉಗ್ರ ಶಾರೀಖ್‌ ಹತ್ಯೆಗೆ ಸಂಚು ನಡೆಯುತ್ತಿದೆ ಎಂಬ ಅನುಮಾನ ಮೂಡಿದೆ. ಉಗ್ರರು ಶಾರೀಖ್‌ನನ್ನು ಆಸ್ಪತ್ರೆಯಲ್ಲೇ ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ. ಈ ಕಾರಣಕ್ಕಾಗಿ ಶಾರೀಖ್‌ ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

ಸ್ಲೀಪರ್ ಸೆಲ್‍ಗಳನ್ನು ಹ್ಯಾಂಡ್ಲರ್ ಗಳು ಆಕ್ಟೀವ್ ಮಾಡಿಸಿ ದಾಳಿ ನಡೆಸೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶಾರೀಖ್‌ನೊಂದಿಗೆ ಬ್ಯಾಗ್ ಹಾಕಿಕೊಂಡು ಬಂದವನೂ ನಾಪತ್ತೆ ಆಗಿರೋದ್ರಿಂದ ಆತಂಕ ಹೆಚ್ಚಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೀತಿರೋ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ.

 

Share Post