CrimeDistricts

ಮಗಳನ್ನು ಪ್ರೀತಿಸುತ್ತಿದ್ದಾನೆಂಬ ಶಂಕೆ; ಬಾಲಕನನ್ನು ದೊಣ್ಣೆಯಿಂದ ಹೊಡೆದು ಹತ್ಯೆ

ಮಡಿಕೇರಿ; ತನ್ನ ಮಗಳನ್ನು ಪ್ರೀತಿಸುತ್ತಿದ್ದಾನೆಂಬ ಶಂಕೆಯಿಂದ ವ್ಯಕ್ತಿಯೊಬ್ಬ ಬಾಲಕನನ್ನು ದೊಣ್ಣೆಯಿಂದ ಕೊಲೆ ಮಾಡಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

16 ವರ್ಷದ ಬಾಲಕ ಕಳೆದ ತಡರಾತ್ರಿ ಆರೋಪಿಯ ಮನೆಗೆ ಹೋಗಿದ್ದ. ಈ ವೇಳೆ ಆರೋಪಿ ತಪ್ಪಾಗಿ ತಿಳಿದಿದ್ದು, ಬಾಲಕ ನನ್ನ ಮಗಳನ್ನು ಪ್ರೀತಿಸುತ್ತಿದ್ದಾನೆ. ಅದಕ್ಕೇ ಇಲ್ಲಿಗೆ ಬಂದಿದ್ದಾನೆ ಎಂದು ತಿಳಿದು ಆಕ್ರೋಶಗೊಂಡಿದ್ದಾನೆ.

ಬಾಲಕನನ್ನು ನೋಡುತ್ತಲೇ ಕೋಪದಿಂದ ಆರೋಪಿ ದೊಣ್ಣೆಯಿಂದ ತೀವ್ರವಾಗಿ ಹಲ್ಲೆ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸುವ ಪ್ರಯತ್ನ ಮಾಡಿದ್ದಾರೆ. ಆದ್ರೆ ಬಾಲಕ ದಾರಿಮಧ್ಯೆಯೇ ಸಾವನ್ನಪ್ಪಿದ್ದಾನೆ.

ಈ ಬಗ್ಗೆ ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

 

Share Post