CrimeDistricts

ಕೆರೆಯಲ್ಲಿ ಯುವಕನ ಮೃತದೇಹ ಪತ್ತೆ; ಸಾವಿನ ಬಗ್ಗೆ ಹಲವು ಅನುಮಾನ..!

ಚಿಕ್ಕಬಳ್ಳಾಪುರ; ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡ ಬಳ್ಳಾಪುರ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ದೊಡ್ಡ ಬಳ್ಳಾಪುರ ತಾಲ್ಲೂಕಿನ ಚಿಕ್ಕ ಹೆಜ್ಜಾಜಿ ಗ್ರಾಮದ ಬಳಿಯ ಕೆರೆಯಲ್ಲಿ ನಂದೀಶ್‌ ಎಂಬ 18 ವರ್ಷದ ಹುಡುಗನ ಶವ ಪತ್ತೆಯಾಗಿದೆ. ಕೊಲೆ ಮಾಡಿ ಕೆರೆಯಲ್ಲಿ ಶವವನ್ನು ಬಿಸಾಕಿರಬಹುದು ಎಂದು ಶಂಕಿಸಲಾಗಿದೆ.

ಮೃತ ಯುವಕ ನಂದೀಶ್‌   ಶ್ಯಾಕುಲದೇವನಪುರದವನು.  ಅಜ್ಜಿ ಮನೆಯಲ್ಲಿ ವಾಸವಿದ್ದ ಯುವಕ ನಂದೀಶ್ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ. ಚಿಕ್ಕ ಹೆಜ್ಜಾಜಿ ಗ್ರಾಮದ ಬಳಿ ನಂದೀಶ್ ಬೈಕ್ ಪತ್ತೆಯಾಗಿದೆ. ಕೆರೆಯ ನೀರಿನಲ್ಲಿ ಅರ್ಧಂಬರ್ಧ ಮುಳುಗಿರುವ ರೀತಿಯಲ್ಲಿ ಯುವಕ ನಂದೀಶ್ ಶವ ಪತ್ತೆಯಾಗಿದೆ. ಬೆಳಗ್ಗೆ ದಾರಿಯಲ್ಲಿ ಹೋಗುವ ವಾಹನ ಸವಾರರು ಬೈಕನ್ನು ಕಂಡು ಕೆರೆ ಬಳಿ ನೋಡಿದಾಗ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ದೊಡ್ಡ ಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

ಯುವಕನ ಸಂಬಂಧಿಕರು ಕೊಲೆ ಆರೋಪ ಮಾಡಿದ್ದಾರೆ. ಯಾರೋ ಕೊಲೆ ಮಾಡಿ ನಂದೀಶ್ ದೇಹವನ್ನ ಕೆರೆಯಲ್ಲಿ ಬಿಸಾಡಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

 

Share Post