CrimeDistricts

ಕಾವೇರಿ ನದಿಗೆ ಹಾರಿ ಸ್ವಾಮೀಜಿ ಆತ್ಮಹತ್ಯೆ; ಖಿನ್ನತೆಯೇ ಕಾರಣವಾ..?

ಮೈಸೂರು; ಜೈನಮುನಿ ಹತ್ಯೆ ಪ್ರಕರಣ ಹಸಿಯಾಗಿರುವಾಗಲೇ ಮತ್ತೊಬ್ಬ ಸ್ವಾಮೀಜಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲೆ ಟ ನರಸೀಪುರ ತಾಲ್ಲೂಕಿನಲ್ಲಿ ಈ ಘಟನೆ ನಡೆದಿದೆ. ಅರವತ್ತು ವರ್ಷ ವಯಸ್ಸಿನ ಶಿವಪ್ಪ ದೇವರು ಎಂಬ ಸ್ವಾಮೀಜಿಯೇ ಆತ್ಮಹತ್ಯೆ ಮಾಡಿಕೊಂಡವರು.

ನಂಜನಗೂಡು ದೇವನೂರು ಮಠದ ಸ್ವಾಮೀಜಿಗಳ ಶಿಷ್ಯನಾಗಿದ್ದ ಶಿವಪ್ಪ ದೇವರು ಕಳೆದ ಎರಡು ದಿನಗಳಿಂದ ನಾಪತ್ತೆಯಾಗಿದ್ದರು. ಇದೀಗ ಅವರು ಟಿ.ನರಸೀಪುರ ತಾಲೂಕಿನ ಮುಡುಕೊತೊರೆಯ ಬಳಿ ಕಾವೇರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಮೂಲತಃ ಕೊಳ್ಳೇಗಾಲ ತಾಲೂಕಿನ ಕಲಿವೂರು ಎಂದು ತಿಳಿದುಬಂದಿದೆ.

ಕಳೆದ 45 ವರ್ಷಗಳಿಂದಲೂ ಈ ಸ್ವಾಮೀಜಿ ದೇವನೂರು ಮಠದಲ್ಲಿ ಸೇವೆ ಸಲ್ಲಿಸಿಕೊಂಡಿದ್ದರು. ಆದ್ರೆ ಅವರಿಗೆ ಇತ್ತೀಚೆಗೆ ತೀವ್ರ ಅನಾರೋಗ್ಯ ಕಾಡುತ್ತಿತ್ತು. ಇದರಿಂದ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ತಲಕಾಡು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share Post