CinemaDistricts

ಮೈಸೂರಿನ ಶಕ್ತಿಧಾಮಕ್ಕೆ ನಟ ವಿಶಾಲ್‌ ಭೇಟಿ

ಮೈಸೂರು; ದಿ. ಪುನೀತ್ ರಾಜ್​ಕುಮಾರ್ ಹಾಗೂ ಅವರ ಕುಟುಂಬ ನಡೆಸುತ್ತಿರುವ ಶಕ್ತಿಧಾಮಕ್ಕೆ ತಮಿಳು ನಟ ವಿಶಾಲ್ ಭೇಟಿ ನೀಡಿದ್ದರು. ಮೈಸೂರು-ನಂಜನಗೂಡು ರಸ್ತೆಯಲ್ಲಿರುವ ಶಕ್ತಿಧಾಮಕ್ಕೆ ಇಂದು ಭೇಟಿ ನೀಡಿದ ನಟ ವಿಶಾಲ್ ಅವರನ್ನು ಟ್ರಸ್ಟ್​​ನವರು ಬರಮಾಡಿಕೊಂಡರು‌.

   ಪುನೀತ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಶಕ್ತಿಧಾಮಕ್ಕೆ ಸೇವೆ ಮಾಡುತ್ತೇನೆ ಎಂದು ನಟ ವಿಶಾಲ್ ಅವರು ಘೋಷಿಸಿದ್ದರು. ಇದೀಗ ಶಕ್ತಿಧಾಮಕ್ಕೆ ಭೇಟಿ ನೀಡಿ ಮಕ್ಕಳೊಂದಿಗೆ ಮಾತುಕತೆ ನಡೆಸಿದರು. ನಟ ಪುನೀತ್ ರಾಜ್​ಕುಮಾರ್ ಅವರ ಸಾಮಾಜಿಕ ಕಳಕಳಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ವಿಶಾಲ್ ಅವರು ಪುನೀತ್​ ಅವರಂತೆ ಸಮಾಜಕ್ಕೆ ಸಹಾಯ ಮಾಡಲು ಮುಂದಾಗುತ್ತೇನೆ ಎಂದು ಭರವಸೆ ನೀಡಿದ್ದರು. ‌

 

Share Post