CrimeDistricts

ವರ್ಗಾವಣೆ ಮಾಡದಿದ್ದಕ್ಕೆ ಮನನೊಂದು ಶಿಕ್ಷಕಿ ನೇಣುಗೆ ಶರಣು

ದೊಡ್ಡಬಳ್ಳಾಪುರ; ವರ್ಗಾವಣೆಗೆ ಮನವಿ ಮಾಡಿದರೂ ವರ್ಗಾವಣೆ ಮಾಡದಿದ್ದಕ್ಕೆ ಮನನೊಂದು ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. 

ತುರುವನಹಳ್ಳಿ ಸರ್ಕಾರಿ ಶಾಲೆ ಶಿಕ್ಷಕಿಯಾಗಿದ್ದ ಎನ್‌.ಟಿ.ಜ್ಯೋತಿಯವರೇ ಆತ್ಮಹತ್ಯೆ ಮಾಡಿಕೊಂಡವರು. ಮನೆಯಲ್ಲೇ ವೇಲ್‌ನಿಂದ ನೇಣುಬಿಗಿದುಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜ್ಯೋತಿಯವರು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನ ನಲ್ಲಿಕಟ್ಟೆ ಗ್ರಾಮದವರಾಗಿದ್ದಾರೆ. ಇನ್ನು ಪತಿ ವಿರೂಪಾಕ್ಷ ಚಿತ್ರದುರ್ಗ ತಾಲ್ಲೂಕಿನ ದೊಡ್ಡ ಸಿದ್ದವ್ವನಹಳ್ಳಿ ಗ್ರಾಮದವರು. ಮದುವೆಯಾಗಿ 13 ವರ್ಷಗಳಾದರೂ ದಂಪತಿಗೆ ಮಕ್ಕಳಿರಲಿಲ್ಲ ಎಂದು ತಿಳಿದುಬಂದಿದೆ.

ಜ್ಯೋತಿಯವರು 12 ವರ್ಷಗಳಿಂದ‌ ದೊಡ್ಡಬಳ್ಳಾಪುರ ತಾಲ್ಲೂಕಿನ ಬನವತಿ ಸರ್ಕಾರಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.  9 ತಿಂಗಳ ಹಿಂದೆ ಅವರನ್ನು ತುರುವನಹಳ್ಳಿ ಸರ್ಕಾರಿ ಶಾಲೆಗೆ ವರ್ಗಾಯಿಸಲಾಗಿತ್ತು. ಪ್ರೌಢಶಾಲೆಗೆ ವರ್ಗಾವಣೆ ಮಾಡಿಸಿಕೊಳ್ಳಲು ಅವರು ಪ್ರಯತ್ನಿಸ್ತಿದ್ದರು. ಆದ್ರೆ, ಆಗಿರಲಿಲ್ಲ.

 

Share Post