DistrictsPolitics

ಬಿಜೆಪಿ ಸರ್ಕಾರ ರಾಜ್ಯದ ಮಾನ, ಮರ್ಯಾದೆ ಹಾಳು ಮಾಡಿದೆ; ಸಿದ್ದರಾಮಯ್ಯ

ಕೋಲಾರ; ಮೇ ೧೦ರಂದು ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷಕ್ಕೆ ಅಧಿಕಾರ ಮಾಡಲು ಅವಕಾಶ ಕೊಟ್ಟರೆ ಈ ರಾಜ್ಯದ ಜನರ ನೆಲ ಜಲ ಭಾಷೆಯನ್ನು ರಕ್ಷಣೆ ಮಾಡ್ತಾರೆ ಎಂಬುದನ್ನು ವಿಚಾರ ಮಾಡಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಕೋಲಾರದ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಬಂದ ಮೇಲೆ ರಾಜ್ಯ ಹಿಂದೆಂದೂ ಇಲ್ಲದ ಕೆಟ್ಟ ಹೆಸರು ತೆಗೆದುಕೊಂಡಿದೆ ಎಂದು ಆಕ್ರೋಶ ಹೊರಹಾಕಿದರು.

ಮೋದಿ ಹಾಗೂ ಬೊಮ್ಮಾಯಿ ನಮ್ಮದು ಡಬಲ್‌ ಎಂಜಿನ್‌ ಸರ್ಕಾರ ಎಂದು ಹೇಳುತ್ತಿದ್ದಾರೆ. ಆದ್ರೆ ನಮ್ಮ ರಾಜ್ಯ ಮಾನ ಮರ್ಯಾದೆ ಹಾಳು ಮಾಡಿದ್ದು ಇದೇ ಡಬಲ್‌ಎಂಜಿನ್‌ ಸರ್ಕಾರ. ಇದೀಗ ನಂದಿನಿ ಹಾಲಿಗೆ ಸಂಚಕಾರ ತರೋಕೆ ಹೊರಟಿದ್ದಾರೆ. ರಾಜ್ಯದಲ್ಲಿ ಅಮುಲ್‌ ಹಾಲು ತರಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ ಜನ ಅಮುಲ್‌ ಹಾಲನ್ನು ತಿರಸ್ಕರಿಸಿ ಕೇಂದ್ರ ಸರ್ಕಾರಕ್ಕೆ ಬುದ್ಧಿ ಗಳಿಸಬೇಕು ಎಂದು ಮನವಿ ಮಾಡಿದರು.

Share Post