DistrictsPolitics

ಪ್ರಜಾಪ್ರಭುತ್ವದ ಮೇಲೆ ಬಿಜೆಪಿ ಸವಾರಿ ಮಾಡುತ್ತಿದೆ; ರಾಹುಲ್‌ ಗಾಂಧಿ

ಬೀದರ್‌; ದೇಶದಲ್ಲಿ ಪ್ರಜಾಪ್ರಭುತ್ವದ ದಾರಿ ತೋರಿಸಿದವರು ಬಸವಣ್ಣನವರು. ಆದರೆ ಬಸವಣ್ಣನವರ ವಿಚಾರದ ಮೇಲೆ ಬಿಜೆಪಿ ಪಕ್ಷ ದಾಳಿ ಮಾಡುತ್ತಿದೆ ಎಂದು ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಹೇಳಿದ್ದಾರೆ. ಭಾಲ್ಕಿಯಲ್ಲಿ ಆಯೋಜಿಸಿದ್ದ ಜನಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡಿದರು.

ಬೀದರ್‌ ಬಸವಣ್ಣನವರ ಕರ್ಮಭೂಮಿಯಾಗಿತ್ತು. ಅವರು ಪ್ರಜಾಪ್ರಭುತ್ವ ಅಂದ್ರೆ ಏನು ಅಂತ ತೋರಿಸಿಕೊಟ್ಟಿದ್ದರು. ಆದ್ರೆ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ನಾಯಕರು ಪ್ರಜಾಪ್ರಭುತ್ವವನ್ನು ಅಧೋಗತಿಗೆ ತಂದಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಬಿಜೆಪಿಯಂತೆ ಕಾಂಗ್ರೆಸ್‌ ಸುಳ್ಳು ಭರವಸೆಗಳನ್ನು ಕೊಡುವುದಿಲ್ಲ. ಬಿಜೆಪಿಯವರು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂಪಾಯಿ ಹಾಕುತ್ತೇನೆ ಎಂದು ಹೇಳಿದ್ದರು. ಆದ್ರೆ ಒಂದು ಪೈಸೆ ಹಾಕಲಿಲ್ಲ. ಅಂತಹ ಭರವಸೆಗಳನ್ನು ಕೊಡಬೇಡಿ ಎಂದು ನಾನು ನಮ್ಮ ರಾಜ್ಯ ನಾಯಕರಿಗೆ ಹೇಳಿದ್ದೇನೆ. ನಾವು ಕೊಟ್ಟ ಭರವಸೆಗಳನ್ನು ಅಧಿಕಾರಕ್ಕೆ ಬಂದ ಮೊದಲ ದಿನವೇ ಈಡೇರಿಸುತ್ತೇನೆ ಎಂದು ಭರವಸೆ ನೀಡಿದರು.

 

Share Post