DistrictsPolitics

ಕಾಂಗ್ರೆಸ್‌ನವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ; ನರೇಂದ್ರ ಮೋದಿ

ಬೆಳಗಾವಿ; ಕಾಂಗ್ರೆಸ್‌ ಸಮಾಜವನ್ನು ವಿಭಜಿಸುವ ಪಕ್ಷ. ಹೀಗಾಗಿ ಆ ಪಕ್ಷವನ್ನು ಎಂದಿಗೂ ಕ್ಷಮಿಸಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಕೋಳಿಗುಡ್ಡ ಹೊರವಲಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಸವಣ್ಣನವರು ಸಮಾನತೆಗಾಗಿ ಹೋರಾಟ ಮಾಡಿದ ನೆಲವಿದು. ಆದ್ರೆ ಇಲ್ಲಿ ಕಾಂಗ್ರೆಸ್‌ ನಾಯಕರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಹಾಗೂ ಟೆಕ್ನಾಲಜಿ ಎರಡಲ್ಲೂ ಮುಂದಿದೆ. ಡಬಲ್‌ ಎಂಜಿನ್‌ ಸರ್ಕಾರ ಉತ್ತಮ ಕೆಲಸ ಮಾಡಿದೆ. ರಾಜ್ಯವನ್ನು ವಿಶ್ವದಲ್ಲೇ ನಂಬರ್‌ ವನ್‌ ರಾಜ್ಯ ಮಾಡುವುದು ನಮ್ಮ ಗುರಿ ಎಂದು ಮೋದಿ ಹೇಳಿದರು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದರೆ ರಾಜ್ಯವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯುತ್ತೇವೆ ಎಂದು ಮೋದಿ ಇದೇ ವೇಳೆ ಹೇಳಿದ್ದಾರೆ.

Share Post