DistrictsPolitics

ಕಾಂಗ್ರೆಸ್‌ ನವರು ದಿಂಬು, ಹಾಸಿಗೆಯಲ್ಲೂ ಭ್ರಷ್ಟಾಚಾರ ಮಾಡಿದ್ದರು; ಸಿಎಂ

ಹುಬ್ಬಳಿ; ಸಿದ್ದರಾಮಯ್ಯ ಅವರ ಅವಧಿಯಲ್ಲಿ ದಿಂಬು, ಹಾಸಿಗೆ, ಕಾಫಿ, ಬಿಸ್ಕೆಟ್‌ ನಲ್ಲೂ ಭ್ರಷ್ಟಾಚಾರ ನಡೆದಿದೆ. ಆಪಾದನೆ ಮಾಡುವವರು ಶುದ್ಧಹಸ್ತರಿರಬೇಕು ಎಂದು ಕಾಂಗ್ರೆಸ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ಟಾಂಗ್‌ ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನವರು ಬಂದ್‌ ಮಾಡಲು ಹೊರಟಿದ್ದಾರೆ. ಅವರಿಗೆ ಜನ ಬೆಂಬಲ ಸಿಗೋದಿಲ್ಲ ಎಂದು ಹೇಳಿದರು.

ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಲ್ಲಾ ಸಚಿವರಿಗೂ ಟಾರ್ಗೆಟ್‌ ಕೊಟ್ಟಿದ್ದರು. ಎಂ.ಬಿ. ಪಾಟೀಲ್, ಕೆ.ಜೆ.ಜಾರ್ಜ್, ಮಹದೇವಪ್ಪ ಅವರನ್ನು ಈ ಬಗ್ಗೆ ಕೇಳಬೇಕು ಎಂದು ಸಿಎಂ ಹೇಳಿದರು. ಭ್ರಷ್ಟಾಚಾರದ ಕೂಪದಲ್ಲಿರೋರು ನಮ್ಮ ಮೇಲೆ ಆಪಾದನೆ ಮಾಡುತ್ತಿದ್ದಾರೆ. ಅವರು ಮಾಡಿದ ಕರ್ಮಕಾಂಡಗಳು ಒಂದಾ ಎರಡಾ ಎಂದು ಸಿಎಂ ಬೊಮ್ಮಾಯಿ ಪ್ರಶ್ನಿಸಿದರು.

Share Post