DistrictsPolitics

ಎಸಿಬಿ ರದ್ದು ಮಾಡಿದ್ದು ನ್ಯಾಯಾಲಯ, ಸರ್ಕಾರವಲ್ಲ; ಸಿದ್ದರಾಮಯ್ಯ

ಮೈಸೂರು; ನಾನು ಲೋಕಾಯುಕ್ತವನ್ನು ಮುಚ್ಚಿದ್ದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಅದು ಸುಳ್ಳು. ನಾವು ಲೋಕಾಯುಕ್ತದ ಯಾವ ಅಧೀಕಾರವನ್ನೂ ಕಿತ್ತುಕೊಂಡಿರಲಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಎಲ್ಲವೂ ಗೊತ್ತಿದೆ. ಆದರೂ ಅವರು ಸುಳ್ಳು ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೇರೆ ರಾಜ್ಯಗಳಲ್ಲಿ ಎಸಿಬಿ ಇತ್ತು. ಹೀಗಾಗಿ ನಾವೂ ಕೂಡಾ ಎಸಿಬಿ ರಚನೆ ಮಾಡಿದ್ದೆವು. ಆದ್ರೆ ನಾವು ಲೋಕಾಯುಕ್ತದ ಅಧಿಕಾರವನ್ನು ಕಿತ್ತುಕೊಂಡಿರಲಿಲ್ಲ. ಲೋಕಾಯುಕ್ತದ ಅಧಿಕಾರ ಕಿತ್ತುಕೊಂಡಿದ್ದನ್ನು ಸಾಬೀತು ಮಾಡಿದರೆ ನಾನು ಈಗಲೇ ರಾಜೀನಾಮೆ ನೀಡುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು. ಇನ್ನು ಎಸಿಬಿ ರದ್ದು ಮಾಡೋದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಿತ್ತು. ಆದ್ರೆ ಬಿಜೆಪಿ ಸರ್ಕಾರ ಎಸಿಬಿ ರದ್ದು ಮಾಡಲಿಲ್ಲ. ರದ್ದು ಮಾಡಬೇಕೆಂದು ನ್ಯಾಯಾಲಯ ಆದೇಶ ಮಾಡಿತು. ಹೀಗಾಗಿ ಅವರು ಎಸಿಬಿಯನ್ನು ರದ್ದು ಮಾಡಿದರು ಎಂದು ಸಿದ್ದರಾಮಯ್ಯ ಇದೇ ವೇಳೆ ಸ್ಪಷ್ಟನೆ ಕೊಟ್ಟಿದ್ದಾರೆ.

Share Post