CrimeDistricts

ಮಲಗಿದ್ದ ವ್ಯಕ್ತಿಯನ್ನು ಕರೆತಂದು ಸ್ನೇಹಿತರಿಂದಲೇ ಕೊಲೆ

ಚಿಕ್ಕಮಗಳೂರು; ಹಣಕಾಸು ವ್ಯವಹಾರದಲ್ಲಿ ಉಂಟಾದ ಮನಸ್ತಾಪದಿಂದಾಗಿ ಮನೆಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಎತ್ತಿಕೊಂಡು ಬಂದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟದಲ್ಲಿ ನಡೆದಿದೆ. ಎಪಿಸಿಎಂಸಿ ಯಾರ್ಡ್‌ನ ಓಂಕಾರ್‌ ಎಂಬಾತನೇ ಕೊಲೆಯಾದ ವ್ಯಕ್ತಿ.

ಕಳೆದ ರಾತ್ರಿ 10.30ರ ಸುಮಾರಿಗೆ ಕೊಲೆಯಾದ ಓಂಕಾರ್‌ ತಮ್ಮ ಮನೆಯಲ್ಲಿ ಮಲಗಿದ್ದರು. ಈ ವೇಳೆ ಸ್ನೇಹಿತರು ಆತನನ್ನು ಹೊರಗೆ ಕರೆದುಕೊಂಡು ಬಂದಿದ್ದು, ಎಪಿಎಂಸಿ ಯಾರ್ಡ್‌ನಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಈ ಸಂಬಂಧ ಓಂಕಾರ್‌ ಸ್ನೇಹಿತರಾದ ಧನರಾಜ್‌, ವಿಜಯ್‌ ಹಾಗೂ ಸುನಿಲ್‌ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಆರೋಪಿಗಳು ಹಾಗೂ ಕೊಲೆಯಾದ ಓಂಕಾರ್‌ ಕ್ಲೋಸ್‌ ಫ್ರೆಂಡ್ಸ್‌ ಆಗಿದ್ದರು. ಎಲ್ಲರೂ ಸೇರಿಕೊಂಡು ಫೈನಾನ್ಸ್ ನಡೆಸುತ್ತಿದ್ದರು. ಇದೇ ವಿಚಾರದಲ್ಲಿ ಮನಸ್ತಾಪವುಂಟಾಗಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದ್ದು, ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.

Share Post