CrimeDistricts

ಪ್ರೀತಿ ನಿರಾಕರಿಸಿದ್ದಕ್ಕೆ ಹುಡುಗಿ ಕೊಂದು ತಾನೂ ಆತ್ಮಹತ್ಯೆ

ಕೊಪ್ಪಳ; ಪ್ರೀತಿ ಮಾಡೋದಿಲ್ಲ ಅಂದಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಜಿಲ್ಲೆಯ ಕುಕುನೂರು ತಾಲ್ಲೂಕಿನ ಬಳಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸುಮಾ ತೋಟದ ಎಂಬ ಪಿಯುಸಿ ಓದುತ್ತಿದ್ದ ಯುವತಿಯೇ ಕೊಲೆಯಾದ ಯುವತಿ. ಯುವತಿಯನ್ನು ಕೊಂದ ಪ್ರಕಾಶ್‌ ಭಜಂತ್ರಿ ಎಂಬಾತ ಕೂಡಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕಾಶ್‌ ಭಜಂತ್ರಿ ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ ಎಂದು ತಿಳಿದುಬಂದಿದೆ. ಕೆಲ ದಿನಗಳಿಂದ ಪ್ರೀತಿಸುವಂತೆ ಸುಮಾಳನ್ನು ಪ್ರಕಾಶ್‌ ಒತ್ತಾಯ ಮಾಡುತ್ತಿದ್ದ. ಆದ್ರೆ ಇದಕ್ಕೆ ಸುಮಾ ಒಪ್ಪಿಲ್ಲ. ಇದ್ರಿಂದ ಆಕ್ರೋಶಗೊಂಡ ಪ್ರಕಾಶ್‌ ಆಕೆಯನ್ನು ಕೊಂದಿದ್ದಾನೆ. ನಂತರ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Share Post