DistrictsPolitics

ಮಾಡಾಳ್‌ ಉಚ್ಛಾಟನೆ ಬಗ್ಗೆ ಹೈಕಮಾಂಡ್‌ ತೀರ್ಮಾನಿಸುತ್ತೆ; ಸಿಎಂ ಬೊಮ್ಮಾಯಿ

ಚಿತ್ರದುರ್ಗ; ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವ ಬಗ್ಗೆ ನಮ್ಮ ಹೈಕಮಾಂಡ್‌ ತೀರ್ಮಾನ ಮಾಡುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಮಾಡಾಳ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಅಥವಾ ಪಕ್ಷದಿಂದ ಅವರನ್ನು ಉಚ್ಛಾಟಿಸುವ ಬಗ್ಗೆ ಹೈಕಮಾಂಡ್‌ ತೀರ್ಮಾನಿಸುತ್ತದೆ ಎಂದರು.

ಇನ್ನು ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರವನ್ನು ಕೊಲೆಗಡುಕ ಸರ್ಕಾರ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಕಾಲದಲ್ಲೇ ಅತಿಹೆಚ್ಚು ಕೊಲೆಗಳಾಗಿದ್ದವು ಎಂದು ಟಾಂಗ್‌ ನೀಡಿದ್ದಾರೆ.

Share Post