DistrictsNational

ರಾಹುಲ್‌ ಸೂಚನೆ ಹಿನ್ನೆಲೆ; ಹುಬ್ಬಳ್ಳಿಯಲ್ಲಿ ನಡೆಯಬೇಕಿದ್ದ ಕೆಪಿಸಿಸಿ ಸಭೆ ರದ್ದು

ಹುಬ್ಬಳ್ಳಿ; ಹುಬ್ಬಳ್ಳಿಯಲ್ಲಿ ಇಂದು ರಾತ್ರಿ 8 ಗಂಟೆಗೆ ನಡೆಯಬೇಕಿದ್ದ ಕೆಪಿಸಿಸಿ ರಾಜಕೀಯ ಸಮಿತಿ ಸಭೆಯನ್ನು ರದ್ದು ಮಾಡಲಾಗಿದೆ. ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ಸೂಚನೆ ಮೇರೆಗೆ ಸಭೆಯಲ್ಲಿ ಕ್ಯಾನ್ಸಲ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ರಾಹುಲ್‌ ಅವರು ರಾಜ್ಯಕ್ಕೆ ಬರುತ್ತಿದ್ದರಿಂದ ಕೆಪಿಸಿಸಿ ರಾಜಕೀಯ ಸಮಿತಿ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಇದರಲ್ಲಿ ರಾಹುಲ್‌ ಗಾಂಧಿ ಕೂಡಾ ಪಾಲ್ಗೊಳ್ಳಬೇಕಿತ್ತು. ಆದ್ರೆ, ಸಿದ್ದರಾಮಯ್ಯ ಬಣ ಹಾಗೂ ಮೂಲ ಕಾಂಗ್ರೆಸ್‌ ನಾಯಕರ ವಾಗ್ವಾದ ಸಾಧ್ಯತೆ ಹಿನ್ನೆಲೆಯಲ್ಲಿ ಈ ಸಭೆ ರದ್ದು ಮಾಡಲಾಗಿದೆ ಎನ್ನಲಾಗುತ್ತಿದೆ.

Share Post