DistrictsPolitics

ಲೋಕಸಭಾ ಚುನಾವಣೆ ವೇಳೆ ರಾಜ್ಯ ಸರ್ಕಾರ ಬಿದ್ದೋಗುತ್ತೆ; ಈಶ್ವರಪ್ಪ

ರಾಯಚೂರು; ಲೋಕಸಭಾ ಚುನಾವಣೆ ಬರುವುದರೊಳಗೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಿದ್ದೋಗುತ್ತೆ ಅಂತ ಬಿಜೆಪಿ ನಾಯಕ ಕೆ.ಎಸ್‌.ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ. ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಸರ್ಕಾರ ಲೋಕಸಭಾ ಚುನಾವಣೆ ತನಕವೂ ಇರಲ್ಲ ಎಂದಿದ್ದಾರೆ.

ದೇಶದಲ್ಲಿ ಎಲ್ಲೂ ಕಾಂಗ್ರೆಸ್‌ಗೆ ಅಧಿಕಾರವಿರಲಿಲ್ಲ. ಕರ್ನಾಟಕದಲ್ಲಿ ಗ್ಯಾರೆಂಟಿಗಳ ಹೆಸರೇಳಿ ಜನರಿಗೆ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಈಗ ಡಿ.ಕೆ.ಶಿವಕುಮಾರ್‌ ಕೇಸ್‌ ಚಾಲ್ತಿಗೆ ಬಂದಿದೆ. ಇತ್ತ ಸತೀಶ್‌ ಜಾರಕಿಹೊಳಿಯವರು ಎಷ್ಟು ಶಾಸಕರನ್ನು ಕರೆದೊಯ್ಯುತ್ತಾರೋ ಗೊತ್ತಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಬಿದ್ದೋಗುತ್ತೆ ಅನಿಸುತ್ತಿದೆ ಎಂದು ಅವರು ಹೇಳಿದ್ದಾರೆ.

 

Share Post