DistrictsPolitics

ಟಿಕೆಟ್‌ ವಂಚಿತರಿಗೆ ಮುಂದೆ ಅವಕಾಶಗಳು ಸಿಗುತ್ತವೆ; ಡಿ.ಕೆ.ಶಿವಕುಮಾರ್‌

ಕೋಲಾರ; ಕೆಲ ಕ್ಷೇತ್ರಗಳಲ್ಲಿ ತುಂಬಾನೇ ಆಕಾಂಕ್ಷಿಗಳಿದ್ದರು. ಹೀಗಾಗಿ ಮೂರನೇ ಪಟ್ಟಿ ಬಿಡುಗಡೆ ತಡವಾಯಿತು. ಟಿಕೆಟ್‌ ಸಿಗದಿದ್ದಕ್ಕೆ ಕೆಲವರಿಗೆ ಬೇಸರವಾಗಿದೆ. ಆದ್ರೆ ಈ ಬಾರಿ ಪಕ್ಷ ಅಧಿಕಾರಕ್ಕೆ ಬರಲಿದೆ. ಬಂದರೆ ಟಿಕೆಟ್‌ ವಂಚಿತರೆಲ್ಲರಿಗೂ ಬೇರೆ ಬೇರೆ ಸ್ಥಾನಮಾನ ನೀಡಲಾಗುವುದು ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕೋಲಾರದಲ್ಲಿ ಅವರು ಮಾತನಾಡಿದರು

ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧೋಗತಿಗೆ ತಲುಪಿದೆ. ಬಹುತೇಕ ಕ್ಷೇತ್ರಗಳಲ್ಲಿ ಹಾಲಿ ಹಾಗೂ ಮಾಜಿ ಶಾಸಕರುಗಳು ರಾಜೀನಾಮೆ ಕೊಟ್ಟಿದ್ದಾರೆ. ಇನ್ನೂ ಸಾಕಷ್ಟು ಜನ ಕಾಂಗ್ರೆಸ್‌ ಪಕ್ಷಕ್ಕೆ ಬರಲಿದ್ದಾರೆ. ಮಾತುಕತೆ ನಡೆಯುತ್ತಿದೆ ಎಂದು ಡಿ.ಕೆ.ಶಿವಕುಮಾರ್‌ ಇದೇ ವೇಳೆ ಹೇಳಿದ್ದಾರೆ. ಇನ್ನು 15 ಕ್ಷೇತ್ರಗಳಿಗೆ ಟಿಕೆಟ್‌ ಹಂಚಿಕೆ ಬಾಕಿ ಇದೆ. ನಾಳೆ, ನಾಡಿದ್ದರಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಆಗಲಿದೆ ಎಂದು ಡಿ.ಕೆ.ಶಿವಕುಮಾರ್‌ ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ಕೊಟ್ಟರು.

Share Post