Districts

ಲಿಂಗಸಗೂರು ಬಳಿ ಭೀಕರ ಅಫಘಾತ; ಮೂವರ ದುರ್ಮರಣ

ರಾಯಚೂರು: ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನ ಗೊಲ್ಲಪಲ್ಲಿ ಬಳಿ ಎರಡು  ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು,  ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಮರೇಶ್ (30), ಗೋವಿಂದ್ (35) ದೇವರಾಜ್ (34) ಅಪಘಾತದಲ್ಲಿ ಸಾವನ್ನಪ್ಪಿದ ವ್ಯಕ್ತಿಗಳು. ಎಲ್ಲರೂ ಯಾದಗಿರಿ ಜಿಲ್ಲೆಯ ವಡಗೇರ ಗ್ರಾಮದವರು ಎಂದು ತಿಳಿದುಬಂದಿದೆ. ಬೆಂಗಳೂರಿನಿಂದ ಮದುವೆಗೆಂದು ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post