CrimeDistricts

ಹಾಡಹಗಲೇ ಕಳವು; 5 ಲಕ್ಷ ನಗದು, ಚಿನ್ನಾಭರಣ ಕಳ್ಳತನ

ರಾಯಚೂರು; ರಾಯಚೂರು ಜಿಲ್ಲೆ ಸಿಂಧನೂರು ಬಳಿ ಹಾಡಹಗಲೇ ಕಳ್ಳತನ ನಡೆದಿದೆ. ಇಲ್ಲಿನ ಗೊರೆಬಾಳ ಕ್ಯಾಂಪ್‌ನ ಮನೆಯೊಂದರಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 5 ಲಕ್ಷ ರೂಪಾಯಿ ನಗದನ್ನು ದೋಚಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ್ದನ್ನು ಖಾತ್ರಿ ಮಾಡಿಕೊಂಡಿರುವ ಕಳ್ಳರು. ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದಾರೆ.

ಗೊರೆಬಾಳ ಕ್ಯಾಂಪ್‌ನ ಶೇಷಗಿರಿರಾವ್‌ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನವಾಗಿದೆ. ಶೇಷಗಿರಿರಾವ್‌ ಅವರ ಕುಟುಂಬದವರು ಹೊರಹೋಗಿದ್ದರು. ಇದನ್ನು ಗಮನಿಸಿದ್ದ ಕಳ್ಳರು, ಹಿಂಬಾಗಿಲಿನ ಬೀಗ ಮುರಿದು ಒಳನುಗ್ಗಿದ್ದಾರೆ. ಮನೆಯಲ್ಲಿದ್ದ 5 ಲಕ್ಷ ರೂಪಾಯಿ ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.

Share Post