CrimeDistricts

ಎಟಿಎಂ ಕೊರೆದು 20 ಲಕ್ಷ ರೂಪಾಯಿ ದೋಚಿದ ಕಳ್ಳರು!

ಚಿಕ್ಕೋಡಿ; ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರಿನ ಎಟಿಎಂ ಕೊರೆದು 20 ಲಕ್ಷ ರೂಪಾಯಿ ಹಣವನ್ನು ದೋಚಲಾಗಿದೆ. ಚಿಕ್ಕೋಡಿ ನಗರದಲ್ಲಿರುವ ಅಂಬೇಡ್ಕರ್ ನಗರದ ಎಸ್‌ಬಿಐ ಎಟಿಎಂನಲ್ಲಿ ಕಳ್ಳರು ಕೈಚಳಕ ತೋರಿಸಿದ್ದಾರೆ. 

ಕಟರ್‌ನಿಂದ ಎಟಿಎಂ ಮಷಿನ್‌ ಕಟ್‌ ಮಾಡಿ ಅದರಲ್ಲಿದ್ದ 20 ಲಕ್ಷ ರೂಪಾಯಿ ಹಣವನ್ನು ದೋಚಲಾಗಿದೆ. ಅನಂತರ ಮತ್ತೊಂದು ಎಟಿಎಂಗೂ ಕನ್ನ ಹಾಕಿದ್ದಾರೆ. ಇಂಡಿಯನ್ ಓವರ್‌ಸಿಸ್ ಬ್ಯಾಂಕ್‍ನ ಎಟಿಎಂ ದೋಚಲು ಯತ್ನಿಸಿದ್ದು, ಅದು ಸಾಧ್ಯವಾಗಿಲ್ಲ.

ಕಾರಿನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಸಿಟಿವಿ ಹಾಗೂ ಎಫ್‌ಎಸ್‌ಎಲ್‌ ವರದಿ ಆಧಾರದ ಮೇಲೆ ಆರೋಪಿಗಳಿಗಾಗಿ ಬಲೆ ಬೀಸಲಾಗಿದೆ.

 

Share Post