CrimeDistricts

ಬಿಜೆಪಿ ಮುಖಂಡನ ಮನೆಯಲ್ಲಿ ದರೋಡೆ ಯತ್ನ; ಪಿಸ್ತೂಲ್‌ ಹಿಡಿದು ಬಂದಿದ್ದ ದುಷ್ಕರ್ಮಿಗಳು..!

ಹಾಸನ; ಹಾಸನ ನಗರದ ಬಿಜೆಪಿ ಮುಖಂಡರೊಬ್ಬರ ಮನೆಯಲ್ಲಿ ಹಾಡಹಗಲೇ ದರೋಡೆ ಯತ್ನ ನಡೆದಿದೆ. ಇಬ್ಬರು ದುಷ್ಕರ್ಮಿಗಳು ಪಿಸ್ತೂಲ್  ಹಿಡಿದು ಕೆ.ಆರ್.ಪುರಂನಲ್ಲಿರುವ ಬಿಜೆಪಿ ನಾಯಕ ಡಿ.ಪಿ.ಪ್ರಕಾಶ್‌ ಎಂಬುವರ ಮನೆಯಲ್ಲಿ ದರೋಡೆಗೆ ಯತ್ನಿಸಿದ್ದಾರೆ.

ಡಿ.ಟಿ.ಪ್ರಕಾಶ್ ಮನೆಗೆ ಬಂದ ಇಬ್ಬರು ದುಷ್ಕರ್ಮಿಗಳು ಸೋಮವಾರ ಮಧ್ಯಾಹ್ನ ಮನೆಯ ಬೆಲ್ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿ ಪ್ರಕಾಶ್ ತಾಯಿ ರಂಗಮ್ಮ ಮಾತ್ರ ಇದ್ದರು. ಬಾಗಿಲು ತೆರೆದ ವೇಳೆ, ಇದು ಜಯರಾಯಪಟ್ಟಣ ಪ್ರಕಾಶ್ ಅವರ ಮನೆನಾ ಎಂದು ಕೇಳಿದ್ದಾರೆ. ನಾವು ಉದ್ದೂರಿನಿಂದ ಬಂದಿದ್ದೇವೆ. ಅವರಿಗೆ ಒಂದು ಪಾರ್ಸೆಲ್ ಎಂದು ರಂಗಮ್ಮ ಅವರಿಗೆ ಕವರ್ ಒಂದನ್ನು ನೀಡಿದ್ದಾರೆ.

ರಂಗಮ್ಮ ಕವರ್ ಪಡೆದು ಮನೆಯೊಳಗೆ ಇಟ್ಟು ತಿರುಗುತ್ತಿದ್ದಂತೆ ಓರ್ವ ವ್ಯಕ್ತಿ ವೃದ್ದೆಯ ಕುತ್ತಿಗೆಗೆ ಕೈಹಾಕಿ ಹಣೆಗೆ ಪಿಸ್ತೂಲ್ ಇಟ್ಟಿದ್ದಾನೆ. ಇದರಿಂದ ಗಾಬರಿಗೊಂಡ ರಂಗಮ್ಮ ಜೋರಾಗಿ ಕಿರುಚಾಡಿದ್ದಾರೆ. ಗಾಬರಿಗೊಂಡ ದುಷ್ಕರ್ಮಿಗಳು   ಕಾಂಪೌಂಡ್ ಹಾರಿ ಎಸ್ಕೇಪ್ ಆಗಿದ್ದಾರೆ. ಓರ್ವ ಚಪ್ಪಲಿಯನ್ನು ಬಿಟ್ಟು ಪರಾರಿಯಾಗಿದ್ದಾನೆ.

Share Post