DistrictsPolitics

ಕರ್ನಾಟಕವನ್ನು ನಂಬರ್‌ ವನ್‌ ಮಾಡೋ ಚುನಾವಣೆ ಇದು; ನರೇಂದ್ರ ಮೋದಿ

ಚಿತ್ರದುರ್ಗ; ಕರ್ನಾಟಕವನ್ನು ನಂಬರ್‌ ವನ್‌ ಮಾಡುವ ಚುನಾವಣೆ ಇದು. ನೀವು ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತಂದರೆ ಕರ್ನಾಟಕ ನಂಬರ್‌ ವನ್‌ ಆಗಲಿದೆ. ಕಾಂಗ್ರೆಸ್‌ನವರು ಬಿಜೆಪಿಯ ಅಭಿವೃದ್ಧಿಯ ಬಗ್ಗೆ ಯಾವತ್ತೂ ಕಲ್ಪನೆ ಮಾಡಿಕೊಳ್ಳೋದಕ್ಕೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ನಾವು ದೀನ ದಲಿತರು, ಒಬಿಸಿಗಳಿಗೆ ಅನೇಕ ಯೋಜನೆಗಳನ್ನು ನೀಡಿದ್ದೇವೆ ಎಂದು ಹೇಳಿದರು.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಒಂಬತ್ತು ವರ್ಷಗಳಾಗಿವೆ. ಈ ಕಡಿಮೆ ಅವಧಿಯಲ್ಲಿ ದೇಶದಲ್ಲಿ ಹಲವಾರು ಮೆಡಿಕಲ್‌ ಕಾಲೇಜುಗಳನ್ನು ಸ್ಥಾಪನೆ ಮಾಡಿದ್ದಾರೆ. ಚಿತ್ರದುರ್ಗದಲ್ಲೂ ಮೆಡಿಕಲ್‌ ಕಾಲೇಜು ಸ್ಥಾಪಿಸಲಾಗಿದೆ. ನರ್ಸಿಂಗ್‌ ಕಾಲೇಜು ಕೂಡಾ ತೆರೆದಿದ್ದೇವೆ ಎಂದು ಮೋದಿ ಹೇಳಿದರು. ಚಿತ್ರದುರ್ಗದ 7 ಸುತ್ತಿನ ಕೋಟೆ ರೀತಿ 7 ಸುರಕ್ಷಾ ಕೋಟೆ ಯೋಜನೆಗಳನ್ನು ನಾವು ಜಾರಿಗೆ ತಂದಿದ್ದೇವೆ. ನಮ್ಮ ಅಭಿವೃದ್ಧಿಯನ್ನು ಕಾಂಗ್ರೆಸ್‌ ಊಹೆ ಮಾಡೋದಕ್ಕೂ ಆಗೋದಿಲ್ಲ. ಹೀಗಾಗಿ ನೀವು ಈ ಬಾರಿಯೂ ಬಿಜೆಪಿಗೆ ಮತ ಹಾಕಬೇಕು ಎಂದು ಮೋದಿ ಮನವಿ ಮಾಡಿದರು.

Share Post