DistrictsPolitics

ಸೋನಿಯಾಗಾಂಧಿಗೆ ಬೆದರಿಕೆ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ; ರಮೇಶ್‌ ಜಾರಕಿಹೊಳಿ

ಬೆಳಗಾವಿ; ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿಯವರನ್ನು ಹೆದರಿಸಿ ಡಿಸಿಎಂ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷನಾಗಿದ್ದಾನೆ ಅಂತ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡದೇ ಹೋದರೆ ಇಡಿ ಮುಂದೆ ನಿಮ್ಮ ಹೆಸರನ್ನೂ ಹೇಳುತ್ತೇನೆ ಎಂದು ತಿಹಾರ್‌ ಜೈಲಿನಲ್ಲಿ ಭೇಟಿಯಾಗಿದ್ದಾಗ ಸೋನಿಯಾಗೆ ಹೆದರಿಸಿ ಡಿಕೆಶಿ ಪಕ್ಷದ ಅಧ್ಯಕ್ಷನಾಗಿದ್ದಾನೆ ಎಂದರು.

ಸೋನಿಯಾ ಗಾಂಧಿ ಹಾಗೂ ರಾಹುಲ್‌ ಗಾಂಧಿಯವರ ಬಗ್ಗೆ ಡಿ.ಕೆ.ಶಿವಕುಮಾರ್‌ ಮಾತನಾಡಿರುವ ಆಡಿಯೋ ನನ್ನ ಬಳಿ ಇದೆ. ಡಿ.ಕೆ.ಶಿವಕುಮಾರ್‌ ವಿರುದ್ಧ ಈ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನೀಡಿದರೆ ನಾನು ನನಗೆ ಆತ ಕೊಟ್ಟ ಕಿರುಕುಳ ಹಾಗೂ ಆತನ ಬಗ್ಗೆ ಇರುವ ಎಲ್ಲಾ ದಾಖಲೆಗಳನ್ನು ಒದಗಿಸುತ್ತೇನೆ ಎಂದೂ ಏಕವಚನದಲ್ಲೇ ರಮೇಶ್‌ ಜಾರಕಿಹೊಳಿ ಹೇಳಿದ್ದಾರೆ.

 

Share Post