Districts

ಸ್ನೇಹಿತನ ಅಂತ್ಯಕ್ರಿಯೆಗೆ ಹೋಗುತ್ತಿದ್ದ ಮೂವರು ಮಸಣಕ್ಕೆ

ಯಾದಗಿರಿ; ರಾಯಚೂರು ಜಿಲ್ಲೆ ಲಿಂಗಸಗೂರು ಬಳಿ ಗೊಲ್ಲಪಲ್ಲಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸ್ನೇಹಿತರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ನೇಹಿತನೊಬ್ಬನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿಂದ ಕಾರಿನಲ್ಲಿ ಬರುತ್ತಿದ್ದಾಗ ಎದುರಿಗೆ ಬಂದ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. 

    ಮೃತರನ್ನು ಟಿ ವಡಗೇರಾ ಗ್ರಾಮದ ಅಂಬರೀಶ್ (27), ದೇವಿಂದ್ರಪ್ಪ (26) ಹಾಗೂ ಗೋವಿಂದ (24) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಗ್ರಾಮದ ಬಸಯ್ಯ ಸ್ವಾಮಿ ಎಂಬುವವರು ಮೃತಪಟ್ಟಿದ್ದರು. ಟಿ ವಡಗೇರಾ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಸ್ನೇಹಿತನ ಅಂತ್ಯಕ್ರಿಯೆ ಇವರು ಕಾರಿನಲ್ಲಿ ಬರುವಾಗ ಅಪಘಾತ ಸಂಭವಿಸಿದೆ.

Share Post