CrimeDistricts

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಚಾಮರಾಜನಗರ; ಚಾಮರಾನಗರದ ಬಳಿ ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಾಮರಾಜನಗರ ತಾಲ್ಲೂಕು ಬೇಡರಪುರ ಗ್ರಾಮದಲ್ಲಿ ಈ ದುರಂತ ನಡೆದಿದೆ. ರಾತ್ರಿ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ವಿಷಯ ತಿಳಿದಿದೆ.

ಮಹದೇವಸ್ವಾಮಿ, ಪತ್ನಿ ಸವಿತಾ ಹಾಗೂ ಮಗಳು ಸಿಂಚನ ಆತ್ಮಹತ್ಯೆ ಮಾಡಿಕೊಂಡವರು. ಯಾವ ಕಾರಣಕ್ಕಾಗಿ ಈ ಮೂವರು ಆತ್ಮಹತ್ಯೆ ಮಾಡಿಕೊಂಡರು ಅನ್ನೋದು ಇನ್ನೂ ಗೊತ್ತಾಗಿಲ್ಲ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Share Post