Districts

ನಂಜನಗೂಡಿನ ಬಳಿ ಹುಲಿ ದಾಳಿ; ಹಸುವಿಗೆ ಗಾಯ

ನಂಜನಗೂಡು; ನಂಜನಗೂಡು ತಾಲೂಕಿನ ಮಾದನಹಳ್ಳಿ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ ದಾಳಿ ನಡೆಸಿದೆ. ಗ್ರಾಮದ ಮೂರ್ತಿ ಎಂಬುವವರಿಗೆ ಸೇರಿದ ಹಸುವಾಗಿದ್ದು, ಜಾನುವಾರುಗಳನ್ನು ಮೇಯಿಸುವ ಸಂದರ್ಭದಲ್ಲಿ ಏಕಾಏಕಿ ಹುಲಿ ದಾಳಿ ನಡೆಸಿ, ಗಾಯಗೊಳಿಸಿದೆ.

ಹುಲಿಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಈ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಹಲವು ಬಾರಿ ಮನವಿ ಮಾಡಿದ್ರು ಯಾವುದೇ ಪ್ರಯೋಜನವಾಗಿಲ್ಲ. ಜಮೀನುಗಳಿಗೆ ತೆರಳಲು ರೈತರು ಹಿಂದೇಟು ಹಾಕುತ್ತಿದ್ದಾರೆ. ಗ್ರಾಮದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹುಲಿ ಸೆರೆ ಹಿಡಿಯಲು ಬೋನು ಅಳವಡಿಸಬೇಕು ಎಂದು ರೈತ ಸಂಘ ಮತ್ತು ಟ್ರಾಕ್ಟರ್ ಮಾಲೀಕರ ಸಂಘದ ಅಧ್ಯಕ್ಷ ಪರಶಿವಮೂರ್ತಿ ಒತ್ತಾಯಿಸಿದ್ದಾರೆ.

Share Post